Thursday, January 12, 2023

ಕುವೆಂಪು ವಿ.ವಿ ವಿದ್ಯಾರ್ಥಿಗಳಿಂದ ಸ್ವಾಮಿ ವಿವೇಕಾನಂದರ ಜಯಂತಿ

ಭದ್ರಾವತಿ ತಾಲೂಕಿನ ಶಂಕರಘಟ್ಟ ಕುವೆಂಪು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಗುರುವಾರ ತತ್ತ್ವಜ್ಞಾನಿ, ಯುವ ಸಮುದಾಯ ಚೈತನ್ಯದ ಶಕ್ತಿ ಸ್ವಾಮಿ ವಿವೇಕಾನಂದರ ಜನ್ಮದಿನ ಆಚರಿಸಿದರು.
    ಭದ್ರಾವತಿ, ಜ. ೧೨: ತಾಲೂಕಿನ ಶಂಕರಘಟ್ಟ ಕುವೆಂಪು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಗುರುವಾರ ತತ್ತ್ವಜ್ಞಾನಿ, ಯುವ ಸಮುದಾಯ ಚೈತನ್ಯದ ಶಕ್ತಿ ಸ್ವಾಮಿ ವಿವೇಕಾನಂದರ ಜನ್ಮದಿನ ಆಚರಿಸಿದರು.
    ವಿಶ್ವವಿದ್ಯಾಲಯದ ಮುಂಭಾಗ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಘೋಷಣೆಗಳ ಮೂಲಕ ಸಂಭ್ರಮಿಸಿದರು. ಎನ್‌ಎಸ್‌ಯುಐ ತಾಲೂಕು ಅಧ್ಯಕ್ಷರಾದ ಮುಸ್ವೀರ್ ಬಾಷ ಮತ್ತು ಧವನ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.
    ವಿದ್ಯಾರ್ಥಿ ಪ್ರಮುಖರಾದ ಮುರುಗೇಶ್, ಇಮ್ರಾನ್, ಕೀರ್ತಿ, ವೇಲು, ಹರೀಶ್, ನೂತನ್, ರಾಜೇಶ್, ನಾಗರಾಜ್, ಮದನ್, ಮೋಹನ್, ಶೈಲೂ, ಶ್ರೇಯಸ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment