ಅಕ್ಷರ ಸಂತ, ಸಮಾಜ ಸೇವಕ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಲ ಹಾಜಬ್ಬ ಅವರನ್ನು ಭದ್ರಾವತಿ ಅಪ್ಪರ್ ಹುತ್ತಾ ಅನನ್ಯ ಎಜ್ಯುಕೇಷನ್ ಟ್ರಸ್ಟ್ ವತಿಯಿಂದ ಸೋಮವಾರ ಸನ್ಮಾನಿಸಿ ಗೌರವಿಸಲಾಯಿತು.
ಭದ್ರಾವತಿ: ಅಕ್ಷರ ಸಂತ, ಸಮಾಜ ಸೇವಕ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಲ ಹಾಜಬ್ಬ ಅವರನ್ನು ನಗರದ ಅಪ್ಪರ್ ಹುತ್ತಾ ಅನನ್ಯ ಎಜ್ಯುಕೇಷನ್ ಟ್ರಸ್ಟ್ ವತಿಯಿಂದ ಸೋಮವಾರ ಸನ್ಮಾನಿಸಿ ಗೌರವಿಸಲಾಯಿತು.
ಟ್ರಸ್ಟ್ ೧೦ನೇ ವರ್ಷದ ದಶ ಸಂಭ್ರಮ ಅನನ್ಯೋತ್ಸವ ವಾರ್ಷಿಕ ದಿನಾಚರಣೆಯಲ್ಲಿ ಹಾಜಬ್ಬ ಅವರ ಸೇವೆಯನ್ನು ಸ್ಮರಿಸಿ ಗೌರವಿಸಲಾಯಿತು. ಟ್ರಸ್ಟ್ ಅಧ್ಯಕ್ಷ ಡಾ. ಕೆ ನಾಗರಾಜ್ ಅಧ್ಯಕ್ಷತೆ ವಹಿಸಿದ್ದರು.
ಟ್ರಸ್ಟ್ ಉಪಾಧ್ಯಕ್ಷ ಕೆ.ಪಿ ಹರೀಶ್ಕುಮಾರ್, ಕಾರ್ಯದರ್ಶಿ ಅನಿಲ್ಕುಮಾರ್, ಟ್ರಸ್ಟಿಗಳಾದ ಸುರೇಶ್ಕುಮಾರ್, ಸಿ.ಎನ್ ಗಿರೀಶ್, ಗುರುಪ್ರಸಾದ್ ತಂತ್ರಿ, ಗಿರಿರಾಜ್, ಶ್ರೀನಿಧಿ, ಭಾಗ್ಯ ಸೇರಿದಂತೆ ಒಟ್ಟು ೧೯ ಜನ ಟ್ರಸ್ಟಿಗಳು, ಆಡಳಿತಾಧಿಕಾರಿ ವೇಣುಗೋಪಾಲ್, ಪ್ರಾಂಶುಪಾಲ ಕಲ್ಲೇಶ್, ವಾರ್ಡ್ ನಗರಸಭಾ ಸದಸ್ಯೆ ಲತಾ ಚಂದ್ರಶೇಖರ್ ಸೇರಿದಂತೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
No comments:
Post a Comment