ಕರ್ನಾಟಕ ರಾಷ್ಟ್ರ ಸಮಿತಿ ನೇತೃತ್ವದಲ್ಲಿ ಸ್ಥಳೀಯರ ಪ್ರತಿಭಟನೆ : ತಕ್ಷಣ ಉದ್ಘಾಟಿಸಲು ಆಗ್ರಹ
ಭದ್ರಾವತಿ ನಗರಸಭೆ ವಾರ್ಡ್ ನಂ.೯ರ ಭದ್ರಾ ಕಾಲೋನಿಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣಗೊಂಡು ಸುಮಾರು ೪ ವರ್ಷ ಕಳೆದರೂ ಸಹ ಉದ್ಘಾಟನೆಗೊಳ್ಳದೆ ಪಾಳು ಬಿದ್ದಿದ್ದು, ತಕ್ಷಣ ಅಗತ್ಯವಿರುವ ಸಿಬ್ಬಂದಿಗಳನ್ನು ನಿಯೋಜನೆಗೊಳಿಸಿ ಉದ್ಘಾಟಿಸಬೇಕೆಂದು ಆಗ್ರಹಿಸಿ ಸೋಮವಾರ ಸ್ಥಳೀಯರು ಕರ್ನಾಟಕ ರಾಷ್ಟ್ರ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿದರು.
ಭದ್ರಾವತಿ, ಜ. ೧೬ : ನಗರಸಭೆ ವಾರ್ಡ್ ನಂ.೯ರ ಭದ್ರಾ ಕಾಲೋನಿಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣಗೊಂಡು ಸುಮಾರು ೪ ವರ್ಷ ಕಳೆದರೂ ಸಹ ಉದ್ಘಾಟನೆಗೊಳ್ಳದೆ ಪಾಳು ಬಿದ್ದಿದ್ದು, ತಕ್ಷಣ ಅಗತ್ಯವಿರುವ ಸಿಬ್ಬಂದಿಗಳನ್ನು ನಿಯೋಜನೆಗೊಳಿಸಿ ಉದ್ಘಾಟಿಸಬೇಕೆಂದು ಆಗ್ರಹಿಸಿ ಸೋಮವಾರ ಸ್ಥಳೀಯರು ಕರ್ನಾಟಕ ರಾಷ್ಟ್ರ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿದರು.
ಪ್ರಾಥಮಿಕ ಆರೋಗ್ಯ ಕೇಂದ್ರ ಉದ್ಘಾಟನೆಗೊಳ್ಳದ ಕಾರಣ ಇಲ್ಲಿನ ನಿವಾಸಿಗಳು ಸಾಕಷ್ಟು ತೊಂದರೆ ಅನುಭವಿಸುವಂತಾಗಿದ್ದು, ನೂತನ ಕಟ್ಟಡ ನಿರ್ಮಾಣಗೊಂಡು ೪ ವರ್ಷ ಕಳೆದರೂ ಸಹ ಉದ್ಘಾಟನೆಗೊಳ್ಳದಿರುವುದು ವಿಪರ್ಯಾಸದ ಸಂಗತಿಯಾಗಿದೆ. ಸ್ವತಃ ವೈದ್ಯರಾಗಿರುವ ಆರೋಗ್ಯ ಸಚಿವರಾದ ಡಾ. ಸುಧಾಕರ್ರವರು ತಕ್ಷಣ ಈ ಬಗ್ಗೆ ಗಮನ ಹರಿಸಬೇಕು.
ಕಟ್ಟಡ ಉದ್ಘಾಟನೆಗೊಳ್ಳದ ಕಾರಣ ಪುಂಡರು-ಪೋಕರಿಗಳ ಅಡ್ಡೆಗಳ ಸ್ಥಳವಾಗಿದ್ದು, ದನ-ಕರು, ಹಂದಿ, ನಾಯಿ, ಹಾವು-ಮುಂಗುಸಿಗಳ ಆಶ್ರಯ ತಾಣವಾಗಿದೆ. ಈಗಾಗಲೇ ಕಟ್ಟಡ ಪಾಳು ಬಿದ್ದಿದ್ದು, ತಕ್ಷಣ ಸಂಬಂಧಪಟ್ಟ ಇಲಾಖೆಯವರು ಎಚ್ಚುತ್ತುಕೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಲಾಯಿತು.
ಪಕ್ಷದ ಪ್ರಮುಖರಾದ ಯುವ ಘಟಕದ ಅಧ್ಯಕ್ಷ ಅರಳಿಹಳ್ಳಿ ತ್ಯಾಗರಾಜ್, ತೀರ್ಥಕುಮಾರ್, ರಾಜೇಂದ್ರ, ಚಿನ್ನಯ್ಯ, ಆನಂದ್, ಮಲ್ಲಿಕಾರ್ಜುನ್, ವಿನೋದ್ಕುಮಾರ್, ಅಣ್ಣಪ್ಪ, ಸಿಖಂದರ್ ಹಾಗು ಸ್ಥಳೀಯರು ಉಪಸ್ಥಿತರಿದ್ದರು.
No comments:
Post a Comment