Thursday, January 12, 2023

ಇ-ಆಸ್ತಿ ತಂತ್ರಾಂಶ ಸರಳೀಕರಣಗೊಳಿಸಲು ಮಾಹಿತಿ ನೀಡಿ ಸಹಕರಿಸಿ

    ಭದ್ರಾವತಿ, ಜ. ೧೨: ನಗರಸಭೆ ವತಿಯಿಂದ ಇ-ಆಸ್ತಿ ತಂತ್ರಾಂಶ ಮತ್ತಷ್ಟು ಸರಳೀಕರಣಗೊಳಿಸಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದ್ದು, ಈ ಕಾರ್ಯವನ್ನು ಫೆಬ್ರವರಿ ಅಂತ್ಯದೊಳಗೆ ಮುಕ್ತಾಯಗೊಳಿಸಲಾಗುವುದು. ಈ ಹಿನ್ನಲೆಯಲ್ಲಿ ಅಗತ್ಯವಿರುವ ಮಾಹಿತಿ ನೀಡಿ ಸಹಕರಿಸುವಂತೆ ಪೌರಾಯುಕ್ತ ಎಚ್.ಎಂ ಮನುಕುಮಾರ್ ಮನವಿ ಮಾಡಿದ್ದಾರೆ.
    ಕೆ.ಎಂ.ಎಫ್-೨೪ ಗಣಕೀಕರಣ ಕಾರ್ಯ ಪೂರ್ಣಗೊಳಿಸಲು ನಗರಸಭೆ ಸಿಬ್ಬಂದಿಗಳು ಮನೆಗಳಿಗೆ ಭೇಟಿ ನೀಡಿ ಸರ್ವೇ ನಡೆಸಲಿದ್ದು, ಈ ಸಂದರ್ಭದಲ್ಲಿ ಮನೆ ಮಾಲೀಕರ ಮತ್ತು ಸ್ವತ್ತಿನ ಭಾವಚಿತ್ರ, ಗುರುತಿನ ದಾಖಲೆ, ಆಸ್ತಿ, ನೀರಿನ ತೆರಿಗೆ ಪಾವತಿಸಿರುವ ರಶೀದಿ, ಮಾಲೀಕತ್ವದ ದಾಖಲಾತಿ, ಕಟ್ಟಡ ಪರವಾನಿಗೆ ಪ್ರತಿ ಹಾಗು ಆಸ್ತಿ ಮಾಲೀಕರು ದಾಖಲೆಗಳ ನಕಲು ಪ್ರತಿಗಳನ್ನು ನೀಡಿ ಸಹಕರಿಸಲು ಕೋರಲಾಗಿದೆ.

No comments:

Post a Comment