Saturday, January 7, 2023

ಆರೋಗ್ಯ ಪೂರ್ಣ ಸಮಾಜ ನಿರ್ಮಾಣಕ್ಕಾಗಿ ಶ್ರಮಿಸುತ್ತಿರುವ ರಂಭಾಪುರಿ ಶ್ರೀಗಳು ಸಂಚಾರಿ ಮೂರ್ತಿ

ಸರ್ಕಾರಿ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಬಿಳಿಕಿ ಶ್ರೀ

 ಶ್ರೀಮದ್ ರಂಭಾಪುರಿ ಜಗದ್ಗುರುಗಳ ಜನ್ಮದಿನೋತ್ಸವ ಪ್ರಯುಕ್ತ ಭದ್ರಾವತಿ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಘಟಕದ ವತಿಯಿಂದ ಶನಿವಾರ ಹಾಲು, ಹಣ್ಣು, ಬ್ರೆಡ್ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
    ಭದ್ರಾವತಿ, ಜ. ೬ : ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ವೀರಸಿಂಹಾಸನಾಧೀಶ್ವರ ಶ್ರೀ ೧೦೦೮ ಜಗದ್ಗುರು ಪ್ರಸನ್ನ ರೇಣುಕ ಡಾ. ವೀರಸೋಮೆಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಸಂಚಾರಿ ಮೂರ್ತಿಗಳಾಗಿದ್ದು, ಆರೋಗ್ಯ ಪೂರ್ಣ ಸಮಾಜ ನಿರ್ಮಾಣಕ್ಕಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಇವರಿಗೆ ಭಗವಂತ ಇನ್ನೂ ಹೆಚ್ಚಿನ ಆಯುರಾರೋಗ್ಯ ಕರುಣಿಸಲೆಂದು ಪ್ರಾರ್ಥಿಸುವುದಾಗಿ ಬಿಳಿಕಿ ಹಿರೇಮಠದ ಶ್ರೀ ರಾಜೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು. 
  ಶ್ರೀಮದ್ ರಂಭಾಪುರಿ ಜಗದ್ಗುರುಗಳ ಜನ್ಮದಿನೋತ್ಸವ ಪ್ರಯುಕ್ತ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಘಟಕದ ವತಿಯಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ ಹಾಲು, ಹಣ್ಣು, ಬ್ರೆಡ್ ವಿತರಣೆ ಕಾರ್ಯಕ್ರಮದ ದಿವ್ಯ ಸಾನಿಧ್ಯವಹಿಸಿ ಮಾತನಾಡಿದರು. 
ರಂಭಾಪುರಿ ಜಗದ್ಗುರುಗಳು ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂಬ ಶ್ರೀ ರೇಣುಕಾಚಾರ್ಯರ ಆದರ್ಶತನಗಳನ್ನು ಮೈಗೂಡಿಸಿಕೊಂಡು ಶ್ರೀ ಮಠದಲ್ಲಿ ಹೆಚ್ಚು ಸಮಯ ವಾಸ್ತವ್ಯ ಮಾಡದೆ ನಾಡಿನಾದ್ಯಂತ ಸಂಚರಿಸುವ ಮೂಲಕ ಆರೋಗ್ಯ ಪೂರ್ಣ ಸಮಾಜ ನಿರ್ಮಾಣದಲ್ಲಿ ತೊಡಗಿದ್ದಾರೆ. ಸಮಾಜಕ್ಕೆ ಜಗದ್ಗುರುಗಳ ಸೇವೆ ಅನನ್ಯವಾಗಿದ್ದು, ಇವರ ಜನ್ಮದಿನ ಆಚರಣೆ ಮಾಡುತ್ತಿರುವುದು ಹೆಮ್ಮಯ ವಿಚಾರವಾಗಿದೆ ಎಂದರು. 
ಪ್ರಮುಖರಾದ ನಗರಸಭೆ ಮಾಜಿ ಬಿ.ಕೆ ಮೋಹನ್, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಅಧ್ಯಕ್ಷ ಜಿ. ಸುರೇಶಯ್ಯ, ತೀರ್ಥಯ್ಯ, ಸೇರಿದಂತೆ ಇನ್ನಿತರರು ಮಾತನಾಡಿದರು. 
ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ವೈದ್ಯರಾದ ಡಾ. ಡಿ.ಎಸ್ ಶಿವಪ್ರಕಾಶ್, ಡಾ. ವೀರಭದ್ರಪ್ಪ, ಡಾ. ಮಂಜುನಾಥ್, ಡಾ. ಮಯೂರಿ ಸೇರಿದಂತೆ ಇನ್ನಿತರ ವೈದ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. 
ಶ್ರೀ ಮರುಳ ಸಿದ್ದೇಶ್ವರ ಜನಕಲ್ಯಾಣ ಟ್ರಸ್ಟ್ ಅಧ್ಯಕ್ಷ ಸಿದ್ದಲಿಂಗಯ್ಯ, ಉದ್ಯಮಿ ಬಿ.ಕೆ ಜಗನ್ನಾಥ್, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಉಪಾಧ್ಯಕ್ಷ ವಾಗೀಶ್, ಯುವ ಘಟಕದ ಖಜಾಂಚಿ ರಮೇಶ್, ಮಹಿಳಾ ಘಟಕದ ಅಧ್ಯಕ್ಷೆ ರೂಪನಾಗರಾಜ್, ಕಾರ್ಯದರ್ಶಿಗಳಾದ ಉಷಾ ವೀರಶೇಖರ್, ರೂಪ ಮಹೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

No comments:

Post a Comment