Tuesday, January 31, 2023

ನಗರಸಭೆಯಿಂದ ಕುರುಬ ಸಮಾಜದ ಸಿಬ್ಬಂದಿಗಳಿಗೆ ವಿನಾಕಾರಣ ಕಿರುಕುಳ ಆರೋಪ : ಪ್ರತಿಭಟನೆ

ಭದ್ರಾವತಿ ನಗರಸಭೆಯಲ್ಲಿ ಕೆಲಸ ಮಾಡುತ್ತಿರುವ ಕುರುಬ ಸಮಾಜದ ಸಿಬ್ಬಂದಿಗೆ ಅಧಿಕಾರಿಗಳು ವಿನಾಕಾರಣ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ತಾಲೂಕು ಕುರುಬರ ಸಂಘದ ಪದಾಧಿಕಾರಿಗಳು ನಗರಸಭೆ ಎದುರು ಮಂಗಳವಾರ ಪ್ರತಿಭಟನೆ ಮಾಡಿದರು.
    ಭದ್ರಾವತಿ, ಫೆ. ೧: ನಗರಸಭೆಯಲ್ಲಿ ಕೆಲಸ ಮಾಡುತ್ತಿರುವ ಕುರುಬ ಸಮಾಜದ ಸಿಬ್ಬಂದಿಗೆ ಅಧಿಕಾರಿಗಳು ವಿನಾಕಾರಣ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ತಾಲೂಕು ಕುರುಬರ ಸಂಘದ ಪದಾಧಿಕಾರಿಗಳು ನಗರಸಭೆ ಎದುರು ಮಂಗಳವಾರ ಪ್ರತಿಭಟನೆ ಮಾಡಿದರು.
    ನಗರಸಭೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಕುರುಬ ಸಮಾಜದ ಸಿಬ್ಬಂದಿಯನ್ನು ಆಗಾಗ್ಗೆ ವರ್ಗಾವಣೆ ಮಾಡುವುದು, ಕೆಲಸದ ವೇಳೆ ಕಿರುಕುಳ ನೀಡಲಾಗುತ್ತಿದೆ. ಇದೀಗ ನಗರಸಭೆಯ ವಾಹನ ಚಾಲಕನನ್ನು ಬೇರೆಡೆಗೆ ವರ್ಗಾವಣೆ ಮಾಡಿದ್ದಾರೆ. ಪದೇಪದೆ ಇಂತಹ ವರ್ತನೆಯನ್ನು ಸಮಾಜ ಸಹಿಸುವುದಿಲ್ಲ ಎಂದು ಎಚ್ಚರಿಸಿದರು.
    ಸ್ಥಳಕ್ಕೆ ಆಗಮಿಸಿದ ಶಾಸಕ ಬಿ.ಕೆ.ಸಂಗಮೇಶ್ವರ್ ಕುರುಬ ಸಮುದಾಯದ ಮುಖಂಡರೊಂದಿಗೆ ಮಾತುಕತೆ ನಡೆಸಿ, ವಾಹನ ಚಾಲಕ ಸೋಮು ಅವರ ವರ್ಗಾವಣೆ ಹಿಂಪಡೆಯಲಾಗುತ್ತದೆ. ವಿಷಯವನ್ನು ದೊಡ್ಡದು ಮಾಡುವುದು ಬೇಡ, ಪ್ರತಿಭಟನೆ ಹಿಂಪಡೆಯಿರಿ ಎಂದು ಮನವಿ ಮಾಡಿದರು.
    ಇದೇ ಸಂದರ್ಭ ನಗರಸಭೆಯಲ್ಲಿ ಕೆಲಸ ಮಾಡುತ್ತಿದ್ದ ಅಧಿಕಾರಿಗಳು, ಸಿಬ್ಬಂದಿ ಕರ್ತವ್ಯದಿಂದ ತಾತ್ಕಾಲಿಕ ವಿರಾಮ ನೀಡಿ ಹೊರಬಂದು ಕುರುಬರ ಸಂಘದ ಪ್ರತಿಭಟನೆಗೆ ವಿರೋಧ ವ್ಯಕ್ತಪಡಿಸಿದರು.
    ಕುರುಬರ ಸಂಘದ ಅಧ್ಯಕ್ಷ ಸಂತೋಷ್, ನಗರಸಭಾ ಸದಸ್ಯ ಕಾಂತರಾಜ್, ಮುಖಂಡರಾದ ಸಣ್ಣಯ್ಯ, ಹೇಮಾವತಿ, ಶಾರದಮ್ಮ, ಮಂಜುನಾಥ್(ಕೊಯ್ಲಿ), ಬಿ.ಎಸ್.ನಾರಾಯಣ, ರಾಜೇಶ್, ವಸಂತ, ನಟರಾಜ್, ಕೇಶವ, ವಿಲ್ಸನ್‌ಬಾಬು  ಇತರರಿದ್ದರು.

No comments:

Post a Comment