Monday, January 30, 2023

ವಿಐಎಸ್‌ಎಲ್ ಉಳಿಸಲು ನಿವೃತ್ತ ಕಾರ್ಮಿಕರಿಂದ ಜ.೩೧ರಂದು ದೆಹಲಿ ಜಾಥಾ


    ಭದ್ರಾವತಿ, ಜ. ೩೦: ನಗರದ ವಿಐಎಸ್‌ಎಲ್ ಕಾರ್ಖಾನೆ ಮುಚ್ಚುವ ಆದೇಶ ಹಿಂಪಡೆಯುವಂತೆ ಒತ್ತಾಯಿಸಿ ನಿವೃತ್ತ ಕಾರ್ಮಿಕರು ಜ.೩೧ರಂದು ದೆಹಲಿ ಜಾಥಾ ನಡೆಸಲಿದ್ದಾರೆ.
    ರಾಜ್ಯದ ಪ್ರತಿಷ್ಠಿತ ಕೈಗಾರಿಕೆಗಳಲ್ಲಿ ಒಂದಾಗಿರುವ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಮುಚ್ಚಲು ತೆಗೆದುಕೊಂಡಿರುವ ನಿರ್ಧಾರ ದುರಾದೃಷ್ಟಕರ ಸಂಗತಿಯಾಗಿದ್ದು, ಈ ಬೆಳವಣಿಗೆಯನ್ನು ಖಂಡಿಸುವ ಜೊತೆಗೆ ಲಕ್ಷಾಂತರ ಜನರಿಗೆ ಅನ್ನ ನೀಡಿದ ಹಾಗು ಕ್ಷೇತ್ರದ ಉಸಿರಾಗಿರುವ ಈ ಕಾರ್ಖಾನೆಯನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಈ ಹಿನ್ನಲೆಯಲ್ಲಿ ನಿವೃತ್ತ ಕಾರ್ಮಿಕರ ನಿಯೋಗ ವಿಐಎಸ್‌ಎಲ್ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದ ಅಧ್ಯಕ್ಷ ಬಿ.ಜಿ ರಾಮಲಿಂಗಯ್ಯ ನೇತೃತ್ವದಲ್ಲಿ ದೆಹಲಿ ಜಾಥಾ ನಡೆಸಲಿದೆ.
    ನಿಯೋಗ ಜ.೩೧ರಂದು ದೆಹಲಿಯಲ್ಲಿ ಸಂಬಂಧಪಟ್ಟ ಸಚಿವರು ಹಾಗು ರಾಜ್ಯದ ಎಲ್ಲಾ ಸಂಸದರನ್ನು ಭೇಟಿಯಾಗಿ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಮುಚ್ಚದಂತೆ ಹಾಗು ಸೂಕ್ತ ಬಂಡವಾಳ ತೊಡಗಿಸಿ ಆಧುನೀಕರಣಗೊಳಿಸಿ ಅಭಿವೃದ್ಧಿಪಡಿಸುವಂತೆ ಒತ್ತಾಯಿಸಲಿದೆ ಎಂದು ವಿಐಎಸ್‌ಎಲ್ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದ ಪ್ರಧಾನ ಕಾರ್ಯದರ್ಶಿ ಬಿ.ಆರ್ ನಾಗರಾಜ ತಿಳಿಸಿದ್ದಾರೆ.

No comments:

Post a Comment