ಭದ್ರಾವತಿ ಕ್ರೈಸ್ತ ಸಮುದಾಯದ ಯುವ ಮುಖಂಡ ಅಮೋಸ್ ಕಾಂಗ್ರೆಸ್ ಪಕ್ಷ ತೊರೆದು ಅಧಿಕೃತವಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಭದ್ರಾವತಿ, ಜ. ೩ : ಕ್ರೈಸ್ತ ಸಮುದಾಯದ ಯುವ ಮುಖಂಡ ಅಮೋಸ್ ಕಾಂಗ್ರೆಸ್ ಪಕ್ಷ ತೊರೆದು ಅಧಿಕೃತವಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ರಾಜ್ಯ ವಕ್ತಾರರಾಗಿ ಸೇವೆ ಸಲ್ಲಿಸಿರುವ ಅಮೋಸ್ ಕಡಿಮೆ ಅವಧಿಯಲ್ಲಿ ಹೆಚ್ಚಿನ ಜನಪ್ರಿಯತೆ ಗಳಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಇದೀಗ ಏಕಾಏಕಿ ಕಾಂಗ್ರೆಸ್ ತೊರೆದಿದ್ದಾರೆ.
ತಾಲೂಕಿನ ಅಂತರಗಂಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆ.ಎಚ್ ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಪ್ಪಾಜಿಯ ಋಣಾನುಬಂಧ ಕಾರ್ಯಕ್ರಮದಲ್ಲಿ ಅಮೋಸ್ ತಮ್ಮ ಬೆಂಬಲಿಗರೊಂದಿಗೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಾರದ ಅಪ್ಪಾಜಿಯವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಜೆಡಿಎಸ್ ಪಕ್ಷದ ಪ್ರಮುಖರಾದ ಜೆ.ಪಿ ಯೋಗೇಶ್, ಆರ್. ಕರುಣಾಮೂರ್ತಿ, ಮಧುಕುಮಾರ್, ಎಂ.ಎ ಅಜಿತ್, ಧರ್ಮೇಗೌಡ, ಆನಂದ್, ಲಕ್ಷ್ಮೀದೇವಿ, ಜಯರಾಂ ಗೊಂದಿ, ಧರ್ಮರಾಜ್, ಮುರ್ತುಜಾಖಾನ್, ಎಚ್.ಬಿ ರವಿಕುಮಾರ್, ಉಮೇಶ್ ಸೇರಿದಂತೆ ಇನ್ನಿತರ ಮುಖಂಡರುಗಳು ಉಪಸ್ಥಿತರಿದ್ದರು.
No comments:
Post a Comment