Friday, January 6, 2023

ಬಿಜೆಪಿ ಸರ್ಕಾರದಿಂದ ಎಸ್‌ಸಿ/ಎಸ್‌ಟಿ ಮತ ಬ್ಯಾಂಕ್ ಹೊಂದಲು ದಲಿತರ ದಾರಿ ತಪ್ಪಿಸುವ ಹುನ್ನಾರ

ಜ.೮ರಂದು ಚಿತ್ರದುರ್ಗ ಕ್ಷೇತ್ರದ ಎಸ್‌ಸಿ/ಎಸ್‌ಟಿ ವಿಭಾಗದ ಸಮಾವೇಶ

ಜ.೮ರಂದು ಚಿತ್ರದುರ್ಗ ಕ್ಷೇತ್ರದ ಎಸ್‌ಸಿ/ಎಸ್‌ಟಿ ವಿಭಾಗದ ಸಮಾವೇಶ ನಡೆಯುವ ಹಿನ್ನಲೆಯಲ್ಲಿ ಭದ್ರಾವತಿಯಲ್ಲಿ ತಾಲೂಕು ಎಸ್‌ಸಿ/ಎಸ್‌ಟಿ ವಿಭಾಗ ವತಿಯಿಂದ  ಸಭೆ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ, ಜ. ೭ : ಬಿಜೆಪಿ ಸರ್ಕಾರ ದಲಿತರ ಮತ ಬ್ಯಾಂಕ್ ಹೊಂದುವ ಉದ್ದೇಶದಿಂದ ಅವರ ದಾರಿ ತಪ್ಪಿಸುವ ಹುನ್ನಾರ ನಡೆಸುತ್ತಿದೆ. ಈ ಹಿನ್ನಲೆಯಲ್ಲಿ ಜ.೮ರಂದು ಪಕ್ಷದ ಚಿತ್ರದುರ್ಗ ಕ್ಷೇತ್ರದ ಎಸ್‌ಸಿ/ಎಸ್‌ಟಿ ವಿಭಾಗದ ಸಮಾವೇಶ ನಡೆಸುವ ಮೂಲಕ ಜಾಗೃತಿ ಮೂಡಿಸಲಾಗುವುದು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ಸಂಚಾಲಕ, ಶಿವಮೊಗ್ಗ ಜಿಲ್ಲಾ ವೀಕ್ಷಕ ಎನ್.ಆರ್ ಚಂದ್ರಶೇಖರ್ ಹೇಳಿದರು.
    ಅವರು ಪಕ್ಷದ ತಾಲೂಕು ಎಸ್‌ಸಿ/ಎಸ್‌ಟಿ ವಿಭಾಗ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಬಿಜೆಪಿ ಸರ್ಕಾರ ಭಾವನಾತ್ಮಕವಾಗಿ ಹಿಂದೂ ಧರ್ಮದ ವಿಚಾರಧಾರೆಗಳ ಮೂಲಕ ದಲಿತ ಯುವ ಸಮುದಾಯದ ದಾರಿ ತಪ್ಪಿಸುತ್ತಿದೆ. ಅಲ್ಲದೆ ಯುವ ಸಮುದಾಯಕ್ಕೆ ಉದ್ಯೋಗ ಕಲ್ಪಿಸಿಕೊಡದೆ ನಿರುದ್ಯೋಗಿಗಳನ್ನಾಗಿಸಿದೆ ಎಂದರು ಆರೋಪಿಸಿದರು.
    ಮೀಸಲಾತಿ ಹೆಚ್ಚಳದ ಪ್ರಸ್ತಾಪ ಮಾಡಿ ದಲಿತರ ಮತ ಬ್ಯಾಂಕ್ ಹೊಂದುವ ಹುನ್ನಾರ ನಡೆಸುತ್ತಿದೆ. ದಲಿತರ ಮೇಲೆ ಸ್ವಲ್ಪವೂ ಕಾಳಜಿ ಹೊಂದಿಲ್ಲ. ಕಾಂಗ್ರೆಸ್ ಪಕ್ಷ ತನ್ನ ಅಧಿಕಾರದ ಅವಧಿಯಲ್ಲಿ ಎಸ್‌ಸಿ/ಎಸ್‌ಟಿ ನಿಗಮ ಮಂಡಳಿಗಳಿಗೆ ರು. ೫ ಲಕ್ಷ ಸಹಾಯ ಧನ ನೀಡುತ್ತಿತ್ತು. ಬಿಜೆಪಿ ಸರ್ಕಾರ ಇದನ್ನು ೫೦ ಸಾವಿರ ರು.ಗಳಿಗೆ ಇಳಿಸಿದೆ. ಮಕ್ಕಳ ವಿದ್ಯಾರ್ಥಿ ವೇತನ ಸ್ಥಗಿತಗೊಳಿಸಿದೆ. ಅಲ್ಲದೆ ಸಂವಿಧಾನ ತಿದ್ದುಪಡಿ ಮಾಡುವ ಉದ್ದೇಶ ಹೊಂದಿದೆ ಎಂದು ಆರೋಪಿಸಿದರು.
    ಬಿಜೆಪಿ ಸರ್ಕಾರದ ದಲಿತಪರ ವಿರೋಧಿ ನೀತಿಗಳನ್ನು ಖಂಡಿಸಿ ಇವುಗಳ ಕುರಿತು ಜಾಗೃತಿ ಮೂಡಿಸುವ ಉದ್ದೇಶ ಸಮಾವೇಶದಲ್ಲಿ ಹೊಂದಲಾಗಿದೆ. ಸುಮಾರು ೫ ಲಕ್ಷಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಪಕ್ಷದ ರಾಷ್ಟ್ರ ಮತ್ತು ರಾಜ್ಯಮಟ್ಟದ ನಾಯಕರು ಉಪಸ್ಥಿತರಿರುವರು ಎಂದರು.
    ಸಭೆಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್, ಕೆಪಿಸಿಸಿ ಸಂಚಾಲಕ, ಜಿಲ್ಲಾ ಉಸ್ತುವಾರಿ ಮಲ್ಲೇಶಪ್ಪ, ಎಸ್.ಸಿ ವಿಭಾಗದ ಜಿಲ್ಲಾಧ್ಯಕ್ಷ ಕೃಷ್ಣಪ್ಪ, ತಾಲೂಕು ಅಧ್ಯಕ್ಷ ಆರ್. ಅರುಣ್, ಕೆಪಿಸಿಸಿ ಸಂಚಾಲಕ ಬಿ.ಪಿ ರಾಘವೇಂದ್ರ, ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ, ಡಾ. ಕೃಷ್ಣ, ಎಸ್. ರಾಕೇಶ್, ವಿ. ಮಹೇಶ್ ಮತ್ತು ಶರವಣ ಹಾಗು ಯುವ ಮುಖಂಡ ಬಿ.ಎಸ್ ಗಣೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment