Friday, January 6, 2023

ಜ.೧೦ರೊಳಗೆ ಎಸ್‌ಸಿ/ಎಸ್‌ಟಿ ಪಡಿತರದಾರರು ಮಾಹಿತಿ ನೀಡಲು ಮನವಿ


ಭದ್ರಾವತಿ, ಜ. ೬: ಅಂತ್ಯೋದಯ ಮತ್ತು ಬಿಪಿಎಲ್ ಪಡಿತರ ಚೀಟಿದಾರರ ಪರಿಶಿಷ್ಟ ಜಾತಿ/ಪಂಗಡದ ಫಲಾನುಭವಿಗಳಿಗೆ ಆಹಾರ ಧಾನ್ಯ ವಿತರಣೆ ಮಾಡುತ್ತಿದ್ದು, ಈ ಹಿನ್ನಲೆಯಲ್ಲಿ ಫಲಾನುಭವಿಗಳ ಮಾಹಿತಿ ನೀಡಲು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕರು ತಹಸೀಲ್ದಾರ್ ಮತ್ತು ಇಲಾಖೆಯ ಸಹಾಯಕ ನಿರ್ದೇಶಕರಿಗೆ ಸೂಚಿಸಿದ್ದಾರೆ.
    ಪರಿಶಿಷ್ಟ ಜಾತಿ/ಪಂಗಡ(ಎಸ್‌ಸಿ/ಎಸ್‌ಟಿ)ದ ಪಡಿತರ ಚೀಟಿ ಹೊಂದಿರುವ ಫಲಾನುಭವಿಗಳು ನ್ಯಾಯಬೆಲೆ ಅಂಗಡಿಗೆ ತೆರಳಿ ಜ.೧೦ರೊಳಗೆ ಜಾತಿಗೆ ಸಂಬಂಧಿಸಿದ ಮಾಹಿತಿಯನ್ನು ಅಂಗಡಿ ಮಾಲೀಕರಿಗೆ ನೀಡುವ ಮೂಲಕ ಸಹಕರಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ರಾಜ್ಯ ಕಾರ್ಯದರ್ಶಿ ಸಿದ್ದಲಿಂಗಯ್ಯ ಮನವಿ ಮಾಡಿದ್ದಾರೆ.   

No comments:

Post a Comment