ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಗುತ್ತಿಗೆ ಕಾರ್ಮಿಕರ ಸಂಘ ಕಾರ್ಖಾನೆ ಮುಂಭಾಗ ಕೈಗೊಂಡಿರುವ ಅನಿರ್ಧಿಷ್ಟಾವಧಿ ಹೋರಾಟ ಶುಕ್ರವಾರ ೨ನೇ ದಿನಕ್ಕೆ ಕಾಲಿಟ್ಟಿತು.
ಭದ್ರಾವತಿ, ಜ. ೨೦ : ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಗುತ್ತಿಗೆ ಕಾರ್ಮಿಕರ ಸಂಘ ಕಾರ್ಖಾನೆ ಮುಂಭಾಗ ಕೈಗೊಂಡಿರುವ ಅನಿರ್ಧಿಷ್ಟಾವಧಿ ಹೋರಾಟ ಶುಕ್ರವಾರ ೨ನೇ ದಿನಕ್ಕೆ ಕಾಲಿಟ್ಟಿತು.
ಪ್ರಮುಖರು ಮಾತನಾಡಿ, ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ವಿರುದ್ಧ ನಿರಂತರ ಹೋರಾಟ ನಡೆಯಲಿದೆ. ಕಾರ್ಖಾನೆಯನ್ನು ಯಾವುದೇ ಮುಚ್ಚಲು ಬಿಡುವುದಿಲ್ಲ. ನಮ್ಮ ಹೋರಾಟಕ್ಕೆ ಸಂಸದ ಡಿ.ಕೆ ಸುರೇಶ್, ರಾಜ್ಯಸಭಾ ಸದಸ್ಯರಾದ ಸೈಯದ್ ನಾಸಿರ್ ಹುಸೇನ್, ಎಲ್. ಹನುಮಂತಯ್ಯ, ಜಿ.ಸಿ ಚಂದ್ರಶೇಖರ್ ಸೇರಿದಂತೆ ಇನ್ನಿತರರು ಬೆಂಬಲ ಸೂಚಿಸಿದ್ದು, ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ಗುತ್ತಿಗೆ ಕಾರ್ಮಿಕ ಹೋರಾಟಕ್ಕೆ ನಗರದ ಮಾನವ ಹಕ್ಕುಗಳ ಹೋರಾಟ ಸಮಿತಿ ಸಂಪೂರ್ಣವಾಗಿ ಬೆಂಬಲ ಸೂಚಿಸಿದ್ದು, ಶುಕ್ರವಾರ ಹೋರಾಟ ಸ್ಥಳಕ್ಕೆ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಭೇಟಿ ನೀಡಿ ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ತಕ್ಷಣ ಮುಚ್ಚುವ ಆದೇಶ ಹಿಂಪಡೆಯುವಂತೆ ಆಗ್ರಹಿಸಿದರು.
No comments:
Post a Comment