ಭದ್ರಾವತಿ, ಜ. ೨೪ : ರಸ್ತೆಯಲ್ಲಿ ಹೋಗುತ್ತಿದ್ದಾಗ ವೃದ್ಧೆಯೊಬ್ಬರು ಟ್ರ್ಯಾಕ್ಟರ್ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ತಾಲೂಕಿನ ಭದ್ರಾವತಿ-ಚನ್ನಗಿರಿ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ಅರಳಿಹಳ್ಳಿ ಗ್ರಾಮದ ನಿವಾಸಿ ಮಹಮ್ಮದ್ ಸಾಧಿಕ್ರವರ ಮುತ್ತಜ್ಜಿ ಸುಮಾರು ೯೨ ವರ್ಷ ವಯೋಮಾನದ ಚಮನ್ ಬೀ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಟ್ರ್ಯಾಕ್ಟರ್ ಚಾಲಕ ನಾಗರಾಜ ಎಂಬುವರ ವಿರುದ್ಧ ಪ್ರಕರಣ ದಾಖಲಾಗಿದೆ.
No comments:
Post a Comment