Wednesday, January 4, 2023

ವಿಜೃಂಭಣೆಯಿಂದ ಜರುಗಿದ ಶ್ರೀ ಮಾರಿಯಮ್ಮ ಜಾತ್ರಾ ಮಹೋತ್ಸವ

ಕಣ್ಮನ ಸೆಳೆದ ಅಮ್ಮನವರ ಲಕ್ಷ್ಮೀ ಅಲಂಕಾರ, ಸಾವಿರಾರು ಮಂದಿಗೆ ಅನ್ನಸಂತರ್ಪಣೆ

ಭದ್ರಾವತಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಮೀಪದಲ್ಲಿರುವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. ಬುಧವಾರ ವಿಶೇಷವಾಗಿ ಅಮ್ಮನವರಿಗೆ ಕೈಗೊಳ್ಳಲಾಗಿದ್ದ ಲಕ್ಷ್ಮೀ ಅಲಂಕಾರ ಭಕ್ತರ ಕಣ್ಮನ ಸೆಳೆಯಿತು.
    ಭದ್ರಾವತಿ, ಜ. ೪ : ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಮೀಪದಲ್ಲಿರುವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು.
    ಜಾತ್ರಾ  ಮಹೋತ್ಸವ ಅಂಗವಾಗಿ ಭದ್ರಾ ನದಿ ಶಕ್ತಿ ತೀರ್ಥದಿಂದ ಸೋಮವಾರ ಬೆಳಿಗ್ಗೆ ಅಮ್ಮನವರಿಗೆ ಅಭಿಷೇಕ ನೆರವೇರಿಸಲಾಯಿತು. ಮಂಗಳವಾರ ಸಂಜೆ ಭದ್ರಾನದಿ ದಡದಲ್ಲಿ ಅಮ್ಮನವರ ಶಕ್ತಿ ಕರಗ ನಿರ್ಮಿಸಿ ಅಗ್ನಿಕುಂಡ, ತ್ರಿಶೂಲ ಮುದ್ರೆಯೊಂದಿಗೆ ವರ್ಣರಂಜಿತ ಸಿಡಿಮದ್ದು ಹಾಗು ವಿಶೇಷ ಮಂಗಳ ವಾದ್ಯಗಳೊಂದಿಗೆ ದೇವಸ್ಥಾನಕ್ಕೆ ತರಲಾಯಿತು.
    ಬುಧವಾರ ಮಧ್ಯಾಹ್ನ ಸಾವಿರಾರು ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನೆರವೇರಿಸಲಾಯಿತು. ಸಂಜೆ ೫ ಅಮ್ಮನವರ ಭವ್ಯ ರಾಜಬೀದಿ ಉತ್ಸವ ಮೆರವಣಿಗೆ ನಡೆಯಿತು. ಗುರುವಾರ ಜಾತ್ರಾ ಮಹೋತ್ಸವ ಸಂಪನ್ನಗೊಳ್ಳಲಿದೆ.
    ಸಮಿತಿ ಅಧ್ಯಕ್ಷ, ಉದ್ಯಮಿ ಎ. ಮಾಧು ನೇತೃತ್ವದಲ್ಲಿ ಕಾರ್ಯಕ್ರಮಗಳು ಯಶಸ್ವಿಯಾಗಿ ಜರುಗಿದವು. ಸಮಿತಿ ಪದಾಧಿಕಾರಿಗಳು, ಸೇವಾಕರ್ತರು, ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಜನಪ್ರತಿನಿಧಿಗಳು, ಗಣ್ಯರು ಸೇರಿದಂತೆ ನಗರದ ವಿವಿಧೆಡೆಗಳಿಂದ ಸಾವಿರಾರು ಮಂದಿ ಭಕ್ತಾಧಿಗಳು ದೇವಸ್ಥಾನಕ್ಕೆ ಆಗಮಿಸಿ ಅಮ್ಮನವರ ದರ್ಶನ ಪಡೆದರು. ವಿಶೇಷವಾಗಿ ಅಮ್ಮನವರಿಗೆ ಕೈಗೊಳ್ಳಲಾಗಿದ್ದ ಲಕ್ಷ್ಮೀ ಅಲಂಕಾರ ಭಕ್ತರ ಕಣ್ಮನ ಸೆಳೆಯಿತು.


ಭದ್ರಾವತಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಮೀಪದಲ್ಲಿರುವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. ಬುಧವಾರ ಸಾವಿರಾರು ಮಂದಿಗೆ ಅನ್ನಸಂತರ್ಪಣೆ ನೆರವೇರಿಸಲಾಯಿತು.

No comments:

Post a Comment