ಭದ್ರಾವತಿ, ಜ. 21: ನಗರದ ಬಿಜೆಪಿ ಯುವ ಮುಖಂಡ ನ್ಯಾಯವಾದಿ, ಮಂಗೋಟೆ ರುದ್ರೇಶ್ ಈ ಬಾರಿ ವಿಧಾನಸಭಾ ಚುನಾವಣೆಗೆ ಭದ್ರಾವತಿ ವಿಧಾನಸಭಾ ಕ್ಷೇತ್ರದಿಂದ ಪಕ್ಷದಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಡುವಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಅಭಿಮಾನಿಗಳು ಹಿತೈಷಿಗಳು ಮನವಿ ಮಾಡಿದ್ದಾರೆ.
ವಿವಿಧ ಸಮಾಜಗಳ ಸುಮಾರು ನೂರಕ್ಕೂ ಹೆಚ್ಚು ಅಭಿಮಾನಿಗಳು, ಹಿತೈಷಿಗಳು ಮನವಿ ಮಾಡಿ, ಮಂಗೋಟೆ ರುದ್ರೇಶ್ ಈ ಬಾರಿ ಪಕ್ಷದಿಂದ ಸ್ಪರ್ಧಿಸಿದ್ದಲ್ಲಿ ಚುನಾವಣೆಯಲ್ಲಿ ಗೆಲುವು ಸಾಧಿಸಲು ಸಾಧ್ಯ. ಈಗಾಗಲೇ ಕ್ಷೇತ್ರದಾದ್ಯಂತ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಒಂದು ಬಾರಿ ಅವಕಾಶ ಮಾಡಿಕೊಡುವಂತೆ ಕೋರಿದ್ದಾರೆ.
ಸಚಿವ ಬೈರತಿ ಬಸವರಾಜ್ ಸಂಸದ ಬಿ ವೈ ರಾಘವೇಂದ್ರ ಮುಖಂಡರಾದ ಸಿದ್ದಲಿಂಗಯ್ಯ, ಜ್ಯೋತಿ ಪ್ರಕಾಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment