Wednesday, January 4, 2023

ಅತಿಯಾದ ಮೊಬೈಲ್ ಬಳಕೆ ವಿದ್ಯಾರ್ಥಿಗಳ ಶೈಕ್ಷಣಿಕ ಬದುಕಿಗೆ ಮಾರಕ

ಭದ್ರಾವತಿ ಕಾಗದನಗರದ ಪೇಪರ್‌ಟೌನ್ ಆಂಗ್ಲ ಶಾಲೆಯಲ್ಲಿ ೪೦ನೇ ವಾರ್ಷಿಕೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕ್ರೀಡಾ ಚಟುವಟಿಕೆಗಳ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಪೇಪರ್‌ಟೌನ್ ಪೊಲೀಸ್ ಠಾಣಾಧಿಕಾರಿ ಭಾರತಿ, ವಿ. ಸಂತೋಷ್‌ಕುಮಾರ್, ಆರ್. ಸತೀಶ್ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.
    ಭದ್ರಾವತಿ, ಜ. ೪ : ಮೊಬೈಲ್ ವ್ಯಸನ ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ವೈಯಕ್ತಿಕ ಜೀವನದ ಮೇಲೆ ದುಷ್ಪರಿಣಾಮ ಉಂಟು ಮಾಡಲಿದ್ದು, ಈ ಹಿನ್ನಲೆಯಲ್ಲಿ ಎಚ್ಚರವಹಿಸುವಂತೆ ಮಾಚೇನಹಳ್ಳಿ ಟಿಎಂಎಇಎಸ್ ಆಯುರ್ವೇದಿಕ್ ಕಾಲೇಜಿನ ಮನೋ ಚಿಕಿತ್ಸಕರು ಮತ್ತು ಆಧ್ಯಾತ್ಮಿಕ ಚಿಂತಕರಾದ ವಿ. ಸಂತೋಷ್‌ಕುಮಾರ್ ಹೇಳಿದರು.
    ಅವರು ಬುಧವಾರ ಕಾಗದನಗರದ ಪೇಪರ್‌ಟೌನ್ ಆಂಗ್ಲ ಶಾಲೆಯಲ್ಲಿ ೪೦ನೇ ವಾರ್ಷಿಕೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕ್ರೀಡಾ ಚಟುವಟಿಕೆಗಳ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
    ಅತಿಯಾದ ಮೊಬೈಲ್ ಬಳಕೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಮೇಲೆ ದುಷ್ಪರಿಣಾಮ ಉಂಟು ಮಾಡುತ್ತವೆ. ಪೋಷಕರು ತಮ್ಮ ಮಕ್ಕಳು ಈ ವ್ಯಸನದಿಂದ ಹೊರಬರಲು ಮಕ್ಕಳಿಗೆ ಮೊಬೈಲ್ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಬೇಕು. ಕೆಲವು ಆಪ್‌ಗಳನ್ನು ಮಕ್ಕಳು ಬಳಸದಂತೆ ತಡೆಯುವಲ್ಲಿ ಕ್ರಮ ಕೈಗೊಳ್ಳಬೇಕೆಂದರು.
    ಶಿಕ್ಷಣ ಸಂಯೋಜಕ ರವಿಕುಮಾರ್ ಮಾತನಾಡಿ, ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಪರೀಕ್ಷೆಗೆ ಪೂರ್ವ ಸಿದ್ದತೆಗಳನ್ನು ಮಾಡಿಕೊಳ್ಳಬೇಕು. ವಿಷಯವಾರು ಅಭ್ಯಾಸಕ್ಕೆ ಹೆಚ್ಚಿನ ಗಮನ ಹರಿಸಬೇಕು. ಹೆಚ್ಚಿನ ಅಂಕಗಳನ್ನು ಪಡೆಯಲು ಪ್ರಯತ್ನಿಸಬೇಕೆಂದರು.
    ಕಾಲೇಜಿನ ಪ್ರಾಂಶುಪಾಲ ಆರ್. ಸತೀಶ್, ಉಪ ಪ್ರಾಂಶುಪಾಲ ಡಿ. ನಾಗರಾಜ್, ಪೇಪರ್‌ಟೌನ್ ಪೊಲೀಸ್ ಠಾಣಾಧಿಕಾರಿ ಭಾರತಿ, ಸಿ. ಚನ್ನಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಸಿರಿ ಪ್ರಾರ್ಥಿಸಿ, ಹರ್ಷಿತ ವಂದಿಸಿದರು. ಬಿಂದು ಕಾರ್ಯಕ್ರಮ ನಿರೂಪಿಸಿದರು.  


ಭದ್ರಾವತಿ ಕಾಗದನಗರದ ಪೇಪರ್‌ಟೌನ್ ಆಂಗ್ಲ ಶಾಲೆಯಲ್ಲಿ ೪೦ನೇ ವಾರ್ಷಿಕೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕ್ರೀಡಾ ಚಟುವಟಿಕೆಗಳ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾಚೇನಹಳ್ಳಿ ಟಿಎಂಎಇಎಸ್ ಆಯುರ್ವೇದಿಕ್ ಕಾಲೇಜಿನ ಮನೋ ಚಿಕಿತ್ಸಕರು ಮತ್ತು ಆಧ್ಯಾತ್ಮಿಕ ಚಿಂತಕರಾದ ವಿ. ಸಂತೋಷ್‌ಕುಮಾರ್ ಪಾಲ್ಗೊಂಡು ಮಾತನಾಡಿದರು.

No comments:

Post a Comment