Tuesday, January 31, 2023

ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕರ ಹೋರಾಟ ೧೩ನೇ ದಿನಕ್ಕೆ

ಬಂಜಾರ ಸಮಾಜ, ವಿವಿಧ ಮುಖಂಡರಿಂದ ಬೆಂಬಲ

ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಕಾರ್ಖಾನೆ ಮುಂಭಾಗದಲ್ಲಿ ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಹೋರಾಟ ಮಂಗಳವಾರ ೧೩ನೇ ದಿನ ಪೂರೈಸಿತು. ಈ ನಡುವೆ ಹೋರಾಟಕ್ಕೆ ತಾಲೂಕು ಬಂಜಾರ ಸಮಾಜ ಬೆಂಬಲ ಸೂಚಿಸಿತು.
    ಭದ್ರಾವತಿ, ಜ. ೩೧ : ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಕಾರ್ಖಾನೆ ಮುಂಭಾಗದಲ್ಲಿ ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಹೋರಾಟ ಮಂಗಳವಾರ ೧೩ನೇ ದಿನ ಪೂರೈಸಿತು. ಈ ನಡುವೆ ಹೋರಾಟಕ್ಕೆ ತಾಲೂಕು ಬಂಜಾರ ಸಮಾಜ, ಮಾಜಿ ಉಪಮೇಯರ್ ಮಹಮದ್ ಸನ್ನಾವುಲ್ಲಾ, ಎಎಪಿ ಎಚ್. ರವಿಕುಮಾರ್ ಸೇರಿದಂತೆ ಇನ್ನಿತರರು ಮುಖಂಡರು ಬೆಂಬಲ ಸೂಚಿಸಿದ್ದಾರೆ.
    ಗುತ್ತಿಗೆ ಕಾರ್ಮಿಕರ ಎಲ್ಲಾ ರೀತಿಯ ಹೋರಾಟಕ್ಕೂ ಸಂಪೂರ್ಣ ಬೆಂಬಲ ನೀಡುವ ಜೊತೆಗೆ ತಕ್ಷಣ ಕಾರ್ಖಾನೆ ಮುಚ್ಚುವ ಆದೇಶ ಹಿಂಪಡೆಯಬೇಕು. ಅಗತ್ಯವಿರುವ ಬಂಡವಾಳ ತೊಡಗಿಸಿ ಅಭಿವೃದ್ಧಿಗೊಳಿಸುವಂತೆ ಒತ್ತಾಯಿಸಲಾಯಿತು.
    ಬಂಜಾರ ರೈತರ ಸಂಘದ ರಾಜ್ಯಾಧ್ಯಕ್ಷ ಕೃಷ್ಣನಾಯ್ಕ, ಬಂಜಾರ ಸಮಾಜ ತಾಲೂಕು ಅಧ್ಯಕ್ಷ ಪ್ರೇಮ್‌ಕುಮಾರ್, ಪ್ರವೀಣ್‌ನಾಯ್ಕ, ನಾಗನಾಯ್ಕ, ಪ್ರವೀಣ್‌ಕುಮಾರ್, ಸಂಕ್ರಾನಾಯ್ಕ, ಹಾಲೇಶ್‌ನಾಯ್ಕ, ಶೋಭ್ಯಾನಾಯ್ಕ, ಉಮೇಶ್‌ನಾಯ್ಕ, ಕಾಂಗ್ರೆಸ್ ಪಕ್ಷದ ಮುಖಂಡರಾದ ಡಿ.ಎಚ್ ಕೃಷ್ಣ, ತರುಣ್‌ಕುಮಾರ್ ಹಾಗು ಗುತ್ತಿಗೆ ಕಾರ್ಮಿಕ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಕಾರ್ಖಾನೆ ಮುಂಭಾಗದಲ್ಲಿ ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಹೋರಾಟ ಮಂಗಳವಾರ ೧೩ನೇ ದಿನ ಪೂರೈಸಿತು. ಮಾಜಿ ಉಪಮೇಯರ್ ಮಹಮದ್ ಸನ್ನಾವುಲ್ಲಾ, ಎಎಪಿ ಎಚ್. ರವಿಕುಮಾರ್ ಸೇರಿದಂತೆ ಇನ್ನಿತರರು ಮುಖಂಡರು ಬೆಂಬಲ ಸೂಚಿಸಿದ್ದಾರೆ.

No comments:

Post a Comment