ಗಣರಾಜ್ಯೋತ್ಸವ ಹಾಗು ಕ್ರಾಂತಿಕಾರಿ ಸಂಗೊಳ್ಳಿರಾಯಣ್ಣ ಪುಣ್ಯಸ್ಮರಣೆ ಅಂಗವಾಗಿ ಭದ್ರಾವತಿ ನಗರದ ಕೇಸರಿಪಡೆ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ಗುರುವಾರ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ಭದ್ರಾವತಿ, ಜ. ೨೬: ಗಣರಾಜ್ಯೋತ್ಸವ ಹಾಗು ಕ್ರಾಂತಿಕಾರಿ ಸಂಗೊಳ್ಳಿರಾಯಣ್ಣ ಪುಣ್ಯಸ್ಮರಣೆ ಅಂಗವಾಗಿ ನಗರದ ಕೇಸರಿಪಡೆ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ಗುರುವಾರ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ಹೊಸಸೇತುವೆ ರಸ್ತೆಯ ಜಿ.ಎಸ್ ಆಟೋ ಮೊಬೈಲ್ಸ್ ಬಳಿ ಶಿಬಿರ ಆಯೋಜಿಸಲಾಗಿತ್ತು. ಶಿಬಿರ ಉದ್ದೇಶಿಸಿ ಮಾತನಾಡಿದ ಪ್ರಮುಖರು ಕೇಸರಿಪಡೆ ವತಿಯಿಂದ ಕಳೆದ ೫ ವರ್ಷಗಳಿಂದ ನಿರಂತರವಾಗಿ ರಕ್ತದಾನ ಶಿಬಿರ ಆಯೋಜಿಸಿಕೊಂಡು ಬರುತ್ತಿರುವುದು ಶ್ಲಾಘನೀಯ. ಅಲ್ಲದೆ ಸಾಮಾಜಿಕ, ಧಾರ್ಮಿಕ ಹಾಗು ಶೈಕ್ಷಣಿಕ ಸೇವಾಕಾರ್ಯಗಳಲ್ಲೂ ಕೇಸರಿಪಡೆ ತೊಡಗಿಸಿಕೊಂಡು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸೇವಾಕಾರ್ಯಗಳು ನಡೆಯುವಂತಾಗಲಿ ಎಂದರು.
ಕೇಸರಿಪಡೆ, ತಾಲೂಕು ಕುರುಬ ಸಮಾಜ ಮತ್ತು ಸಂಗೊಳ್ಳಿರಾಯಣ್ಣ ವೇದಿಕೆ ಪ್ರಮುಖರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment