ಅಂತರಾಷ್ಟ್ರೀಯ ಯೋಗ ಚಾಂಪಿಯನ್ಶಿಪ್ ಪಂದ್ಯಾವಳಿಯಲ್ಲಿ ಭದ್ರಾವತಿ ವಿವೇಕಾನಂದ ಯೋಗ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಡಿ. ನಾಗರಾಜ್ ಬೆಳ್ಳಿ ಪದಕ ತಮ್ಮದಾಗಿಸಿಕೊಂಡಿದ್ದಾರೆ.
ಭದ್ರಾವತಿ, ಜ. ೧೦ : ಅಂತರಾಷ್ಟ್ರೀಯ ಯೋಗ ಚಾಂಪಿಯನ್ಶಿಪ್ ಪಂದ್ಯಾವಳಿಯಲ್ಲಿ ನಗರದ ವಿವೇಕಾನಂದ ಯೋಗ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಡಿ. ನಾಗರಾಜ್ ಬೆಳ್ಳಿ ಪದಕ ತಮ್ಮದಾಗಿಸಿಕೊಂಡಿದ್ದಾರೆ.
ಪಾಂಡಿಚೇರಿ ಸರ್ಕಾರದ ಪ್ರವಾಸೋದ್ಯಮ ಇಲಾಖೆ ವತಿಯಿಂದ ಪಾಂಡಿಚೇರಿ ಕರುವಾಡಿಕುಪ್ಪಂನ ಕಾಮರಾಜ ಮಣಿಮಂಟಪಂನಲ್ಲಿ ಆಯೋಜಿಸಲಾಗಿದ್ದ ೨೮ನೇ ಅಂತರಾಷ್ಟ್ರೀಯ ಯೋಗ ಚಾಂಪಿಯನ್ಶಿಪ್ನಲ್ಲಿ ನಾಗರಾಜ್ರವರು ೪೬ ವರ್ಷ ಮೇಲ್ಪಟ್ಟವರ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ.
ಮುಖ್ಯಮಂತ್ರಿ ರಂಗಸ್ವಾಮಿ ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು. ಪ್ರವಾಸೋದ್ಯಮ ಮತ್ತು ಲೋಕೋಪಯೋಗಿ ಸಚಿವ ಕೆ. ಲಕ್ಷ್ಮೀನಾರಾಯಣನ್, ಸಭಾಧ್ಯಕ್ಷ ಆರ್. ಸೆಲ್ವಂ, ಇಲಾಖೆ ನಿರ್ದೇಶಕಿ ಪಿ. ಪ್ರಿಯದರ್ಶಿನಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment