ಭದ್ರಾವತಿ ತಾಲೂಕು ಸರ್ಕಾರಿ ನೌಕರರ ಪ್ರಾಥಮಿಕ ಬಳಕೆದಾರರ ಸಂಘ ನಿಯಮಿತದ ಉಪಾಧ್ಯಕ್ಷರಾಗಿ ಬೊಮ್ಮನಕಟ್ಟೆ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕ ಎ. ತಿಪ್ಪೇಸ್ವಾಮಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಭದ್ರಾವತಿ, ಜ. ೩೧: ತಾಲೂಕು ಸರ್ಕಾರಿ ನೌಕರರ ಪ್ರಾಥಮಿಕ ಬಳಕೆದಾರರ ಸಂಘ ನಿಯಮಿತದ ಉಪಾಧ್ಯಕ್ಷರಾಗಿ ಬೊಮ್ಮನಕಟ್ಟೆ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕ ಎ. ತಿಪ್ಪೇಸ್ವಾಮಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಎಸ್. ಸುಮಾ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಎ. ತಿಪ್ಪೇಸ್ವಾಮಿಯವರು ದಲಿತ ಸಂಘರ್ಷ ಸಮಿತಿ, ಭಗವಾನ ಬುದ್ಧ ವಿಹಾರ/ಮಂದಿರ ಸಂಬುದ್ಧ ಧಮ್ಮಾಂಕುರ ಟ್ರಸ್ಟ್, ಛಲವಾದಿ ಸಮಾಜ ಸೇರಿದಂತೆ ವಿವಿಧ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಇದೀಗ ಸರ್ಕಾರಿ ನೌಕರರ ಪ್ರಾಥಮಿಕ ಬಳಕೆದಾರರ ಸಂಘ ನಿಯಮಿತದ ಉಪಾಧ್ಯಕ್ಷರಾಗಿದ್ದು, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಬಿ ಸಿದ್ದಬಸಪ್ಪ, ತಾಲೂಕು ಸರ್ಕಾರಿ ನೌಕರರ ಸಂಘ ಕಾಯ೯ದಶಿ೯ ರಾಜಪ್ಪ ಮತ್ತು ಎಲ್ಲಾ ಪದಾಧಿಕಾರಿಗಳು ಹಾಗು ಬಳಕೆದಾರರ ಸಂಘದ ಅಧ್ಯಕ್ಷ ಸುಧೀಂದ್ರ ರೆಡ್ಡಿ ಮತ್ತು ನಿದೇ೯ಶಕರು ಸೇರಿದಂತೆ ಇನ್ನಿತರರು ಅಭಿನಂದಿಸಿದ್ದಾರೆ.
No comments:
Post a Comment