Tuesday, February 28, 2023
ಬಿಎಸ್ವೈ ಹುಟ್ಟುಹಬ್ಬದಂದು ಶವದ ಪ್ರತಿಕೃತಿ ನಿರ್ಮಿಸಿ ವಿಕೃತಿ : ಕಿಡಿಗೇಡಿಗಳ ಬಂಧನಕ್ಕೆ ಬಿಜೆಪಿ ಆಗ್ರಹ
ಕೈಗಾರಿಕೆಗಳಿಗೆ ಮೊದಲ ಆದ್ಯತೆ, ಯುವಕರಿಗೆ ಉದ್ಯೋಗ ನೀಡಿ : ಡಾ. ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ
Monday, February 27, 2023
ಭದ್ರಾ ಜಲಾಶಯದಿಂದ ೭ ಟಿಎಂಸಿ ನೀರು ಹರಿಸುವ ಸರ್ಕಾರದ ಆದೇಶಕ್ಕೆ ರೈತರ ವಿರೋಧ
ಪಾದಯಾತ್ರೆ ವೇಳೆ ನಡುರಸ್ತೆಯಲ್ಲಿಯೇ ಕುಳಿತು ಉಪಹಾರ ಸೇವಿಸಿದ ಮಾಜಿ ಶಾಸಕರ ಪುತ್ರ
ಕಾರ್ಖಾನೆ-ಕಾರ್ಮಿಕರ ಹಿತಕಾಪಾಡುವ ಹೋರಾಟಕ್ಕೆ ಬೆಂಬಲ : ಬಿ.ಕೆ ಸಂಗಮೇಶ್ವರ್
ಮನವಿ ಸಲ್ಲಿಸಲು ಅವಕಾಶ ನೀಡದೆ ವಶಕ್ಕೆ ಪಡೆದು ಪ್ರಜಾಪ್ರಭುತ್ವ ಕಗ್ಗೊಲೆ
ಬಿಎಸ್ವೈ-ಬಿವೈಆರ್ ನೀಚಮಟ್ಟದ ರಾಜಕಾರಣ : ಶಾರದ ಅಪ್ಪಾಜಿ
Sunday, February 26, 2023
ಬ್ಯಾರಿಕೇಡ್ ಕಿತ್ತು ಹಾಕಿ ಮುನ್ನುಗ್ಗಿದ ಗುತ್ತಿಗೆ ಕಾರ್ಮಿಕರು : ಶಾಸಕರ ನೇತೃತ್ವದಲ್ಲಿ ಪಾದಯಾತ್ರೆ
ಗುತ್ತಿಗೆ ಕಾರ್ಮಿಕರಿಂದ ಪಾದಯಾತ್ರೆಗೆ ಸಿದ್ಧತೆ: ವಶಕ್ಕೆ ಪಡೆಯಲು ಮುಂದಾಗಿರುವ ಪೊಲೀಸರು
ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮ : ಶೂನ್ಯ ಸಂಚಾರ, ಪರ್ಯಾಯ ಮಾರ್ಗ ಅಧಿಸೂಚನೆ
ಪ್ರಧಾನಿ ಮೋದಿ ಗಮನ ಸೆಳೆಯಲು ಗುತ್ತಿಗೆ ಕಾರ್ಮಿಕರಿಂದ ಪಾದಯಾತ್ರೆ
ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮಕ್ಕೆ ಸುಮಾರು ೨೫ ಸಾವಿರ ಮಂದಿ
೧೮೦ಕ್ಕೂ ಹೆಚ್ಚು ಬಸ್ಸು, ೩೦೦೦ಕ್ಕೂ ಹೆಚ್ಚು ಬೈಕ್ : ಜಿ. ಧರ್ಮಪ್ರಸಾದ್
೫ ದಶಕಗಳ ಹಿಂದೆಯೇ ಸಣ್ಣ ಮಾದರಿ ವಿಮಾನಗಳ ಹಾರಾಟ
Saturday, February 25, 2023
ಫೆ.೨೬ರಂದು ಶೃಂಗೇರಿ ಶಂಕರ ಮಠದಲ್ಲಿ ಶ್ರೀ ಸರಸ್ವತಿ ಪೂಜಾ
ಫೆ.೨೭ರಂದು ಗುತ್ತಿಗೆ ಕಾರ್ಮಿಕರ ಸಂಘದಿಂದ ಬೈಕ್ ರ್ಯಾಲಿ : ಪ್ರಧಾನಿಗೆ ಮನವಿ
ವಿಐಎಸ್ಎಲ್ ಉಳಿಸಲು ಎಲ್ಲಾ ರಾಜಕೀಯ ಪಕ್ಷಗಳು ಇಚ್ಛಾಶಕ್ತಿ ಪ್ರದರ್ಶಿಸಲಿ : ಎಚ್. ವಿಶ್ವನಾಥ್
Friday, February 24, 2023
ಭದ್ರಾವತಿ ಬಂದ್ ಬೆಂಬಲಿಸಿ ಹೋರಾಟದಲ್ಲಿ ಪಾಲ್ಗೊಂಡ ಶಾರದ ಅಪ್ಪಾಜಿ
ಭದ್ರಾವತಿ ಬಂದ್ ಬೆಂಬಲಿಸಿ ನಗರಸಭೆ ಉಪಾಧ್ಯಕ್ಷರ ಚುನಾವಣೆ ಬಹಿಷ್ಕಾರ
ಯುವ ಕಾಂಗ್ರೆಸ್ ರಾಜ್ಯ ವಕ್ತಾರ ವರುಣ್ಗೌಡರಿಗೆ ಜೀವಬೆದರಿಕೆ ; ದೂರು ದಾಖಲು
ಓ.ಸಿ-ಮಟ್ಕಾ ಜೂಜಾಟ ಅಡ್ಡೆ ಮೇಲೆ ದಾಳಿ : ಓರ್ವನ ವಿರುದ್ಧ ಪ್ರಕರಣ ದಾಖಲು
ಭದ್ರಾವತಿ ಬಂದ್ ಸಂಪೂರ್ಣ ಯಶಸ್ವಿ : ಬೃಹತ್ ಪ್ರತಿಭಟನಾ ಮೆರವಣಿಗೆ
ಪ್ರಮುಖ ವೃತ್ತಗಳಲ್ಲಿ ಟೈರ್ಗಳಿಗೆ ಬೆಂಕಿ ಹಚ್ಚಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ
Thursday, February 23, 2023
ಫೆ.೨೪ರ ಭದ್ರಾವತಿ ಬಂದ್ ಬೆಂಬಲಿಸಲು ಗುತ್ತಿಗೆ ಕಾರ್ಮಿಕರಿಂದ ಬೈಕ್ ರ್ಯಾಲಿ
ಶ್ರೀ ಮಾರಿಯಮ್ಮ ದೇವಿ ದೇವಸ್ಥಾನದಲ್ಲಿ ನೂತನ ವಿಗ್ರಹ, ಗೋಪುರ ಕಳಶ ಪ್ರತಿಷ್ಠಾಪನೆ
ಫೆ.೨೪ರ ಭದ್ರಾವತಿ ಬಂದ್ಗೆ ಬೆಂಬಲಿಸಿ : ಶಾರದ ಅಪ್ಪಾಜಿ
ನೂತನ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಹೆಸರು ಸೂಚಿಸಿ
Wednesday, February 22, 2023
ಕುಮಾರಸ್ವಾಮಿ-ಸಿದ್ದರಾಮಯ್ಯ ಅಭಿಮಾನಿಗಳ ನಡುವೆ ಮಾತಿನಚಕಮಕಿ : ವ್ಯಕ್ತಿಯೋರ್ವನ ಮೇಲೆ ಹಲ್ಲೆ
ಕೆ.ಎಂ ಶೋಭ ನಿಧನ
ಅರಣ್ಯ ಇಲಾಖೆ ಮಣ್ಣು ದರ ನಿಗದಿಯಲ್ಲಿ ಕೋಟ್ಯಾಂತರ ರು. ಭ್ರಷ್ಟಾಚಾರ
ಮುಖ್ಯಸ್ಥರ ವಿರುದ್ಧ ನ್ಯಾಯಾಲಯದಲ್ಲಿ ದೂರು ದಾಖಲಿಸಲು ಅನುಮತಿ ನೀಡಿ
ತಾಲೂಕು ಪಂಚಾಯಿತಿ ಬೂತ್ ಮಟ್ಟದಲ್ಲಿ ಇವಿಎಂ, ವಿವಿ ಪ್ಯಾರ್ಡ್ಗಳ ಜಾಗೃತಿ ಕಾರ್ಯಕ್ರಮ
ವಿಐಎಸ್ಎಲ್ ಉಳಿಸಲು ಖಾಸಗಿ ಅನುದಾನರಹಿತ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟ ಆಗ್ರಹ
ಬೃಹತ್ ಪ್ರತಿಭಟನಾ ಮೆರವಣಿಗೆ ಮೂಲಕ ಪ್ರಧಾನಮಂತ್ರಿಗೆ ಮನವಿ
Tuesday, February 21, 2023
ಶಿವಮೊಗ್ಗ ಜಿಲ್ಲೆಯ ರಾಜಕಾರಣಿಗಳಿಗೆ ರೈತರು, ಕಾರ್ಮಿಕರ ಬಗ್ಗೆ ಕಾಳಜಿ ಇಲ್ಲ : ಎಚ್.ಡಿ ಕುಮಾರಸ್ವಾಮಿ
ಪಂಚರತ್ನ ಯಾತ್ರೆ ವೇದಿಕೆ ಕಾರ್ಯಕ್ರಮ ಉದ್ಘಾಟನೆ
ಪಂಚರತ್ನ ಯಾತ್ರೆಯಲ್ಲಿ ಕುಮಾರ ಸ್ವಾಮಿಗೆ ವಿಶೇಷ ಹಾರತುರಾಯಿ
ಸೋಗಾನೆ ವಿಮಾನ ನಿಲ್ದಾಣಕ್ಕೆ ಮೊದಲ ವಿಮಾನ
ಶಿವಮೊಗ್ಗ, ಫೆ. 21 : ಕೊನೆಗೂ ಮಲೆನಾಡಿನ ಜನರ ಬಹು ವರ್ಷಗಳ ಕನಸು ಈಡೇರಿದೆ. ಸೋಗಾನೆ ವಿಮಾನ ನಿಲ್ದಾಣಕ್ಕೆ ಮೊದಲ ವಿಮಾನ ಮಂಗಳವಾರ ಮಧ್ಯಾಹ್ನ ಬಂದಿಳಿದಿದ್ದು, ಜನರಲ್ಲಿ ಸಂಭ್ರಮ ಉಂಟುಮಾಡಿದೆ.
ಪ್ರಾಯೋಗಿಕವಾಗಿ ವಾಯು ಸೇನೆಯ ಬೋಯಿಂಗ್ ವಿಮಾನ ಬಂದಿಳಿದಿದೆ. ಬೋಯಿಂಗ್ 737 – 7HI ಮಾದರಿಯ ವಿಮಾನ ಮಧ್ಯಾಹ್ನ 12 ಗಂಟೆಗೆ ದೆಹಲಿಯಿಂದ ಹೊರಟಿದ್ದು, ಮಧ್ಯಾಹ್ನ 2.30ರ ಹೊತ್ತಿಗೆ ಸೋಗಾನೆ ವಿಮಾನ ನಿಲ್ದಾಣಕ್ಕೆ ಆಗಮಿಸಿದೆ.
ಯಾವುದೇ ಅಡೆತಡೆ ಇಲ್ಲದೆ ವಿಮಾನ ಬಂದಿಳಿದಿದ್ದು, ಮಧ್ಯಾಹ್ನ ವಿಮಾನ ಬರುತ್ತಿದ್ದಂತೆ ಸುತ್ತಮುತ್ತಲ ಪ್ರದೇಶದ ಜನರು ಕುತೂಹಲದಿಂದ ಗಮನಿಸಿದರು.
ವಿಐಎಸ್ಎಲ್-ಎಂಪಿಎಂ ಕಾರ್ಖಾನೆಗಳ ಪುನಶ್ಚೇತನಕ್ಕೆ ಬದ್ದ : ಎಚ್.ಡಿ ಕುಮಾರಸ್ವಾಮಿ
ಭದ್ರಾವತಿ , ಫೆ. 21: ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಮತ್ತು ಮೈಸೂರು ಕಾಗದ ಕಾರ್ಖಾನೆ ಪುನಶ್ಚೇತನಗೊಳಿಸುವುದು ನಮ್ಮ ಉದ್ದೇಶವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಪುನರುಚ್ಚರಿಸಿದರು.
ಅವರ ಮಂಗಳವಾರ ತಾಲೂಕಿನ ಗಡಿ ಭಾಗದ ಕಾರೇನಹಳ್ಳಿಯಲ್ಲಿ ಜೆಡಿಎಸ್ ಪಕ್ಷದ ಬಹು ನಿರೀಕ್ಷಿತ ಪಂಚರತ್ನ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು.
ಶಿಕ್ಷಣ, ಆಸ್ಪತ್ರೆ, ಸ್ವಾಭಿಮಾನಿ ರೈತ, ಉದ್ಯೋಗ, ಮನೆ ನಿರ್ಮಾಣ, ಪ್ರತಿ ಕುಟುಂಬದ ಹಿರಿಯರಿಗೆ 5 ಸಾವಿರ ರು., ಮಸಾಶನ 800 ರು. ಬದಲಾಗಿ 2000 ರು. ಏರಿಕೆ, ಶ್ರೀಮಂತ ಮತ್ತು ಬಡವರ ನಡುವಿನ ಆರ್ಥಿಕ ವ್ಯತ್ಯಾಸ ಕುಗ್ಗಿಸುವುದು. ಜನರ ಆತ್ಮವಿಶ್ವಾಸ ಹೆಚ್ಚಿಸಿ ಸದೃಢ ಸರ್ಕಾರ ನಿರ್ಮಾಣಕ್ಕೆ ಕರೆ ನೀಡುವುದು ಪಂಚರತ್ನ ಯಾತ್ರೆ ಉದ್ದೇಶವಾಗಿದೆ ಎಂದರು.
ಈ ಬಾರಿ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಶಾರದ ಅಪ್ಪಾಜಿ ಅವರನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸುವ ಮೂಲಕ ವಿಧಾನಸಭೆಗೆ ಆಯ್ಕೆ ಮಾಡಬೇಕು. ಆ ಮೂಲಕ ಆ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಕಾರಣಕರ್ತರಾಗಬೇಕೆಂದು ಮನವಿ ಮಾಡಿದರು.
ಯಾತ್ರೆ ಕೆಂಪೇಗೌಡ ನಗರ, ಬಾರಂದೂರು, ಕೆಂಚೇನಹಳ್ಳಿ, ಮಾವಿನಕೆರೆ, ತಾಷ್ಕೆಂಟ್ನಗರ, ಯರೇಹಳ್ಳಿ, ಮಾರುತಿನಗರ, ಶಿವನಿಕ್ರಾಸ್, ಗೌರಾಪುರ, ಬಸವನಗುಡಿ, ಕೆ.ಎಚ್ ನಗರ, ಅಂತರಗಂಗೆ, ಕಾಚಗೊಂಡನಹಳ್ಳಿ, ಅಶ್ವಥ್ನಗರ, ಶಿವಾಜಿ ವೃತ್ತ, ರಂಗಪ್ಪ ವೃತ್ತ, ಮಾಧವಚಾರ್ ವೃತ್ತ, ಹಾಲಪ್ಪ ವೃತ್ತ, ಅಂಡರ್ಬ್ರಿಡ್ಜ್, ಹೊಸ ಸೇತುವೆ, ಕೆಎಸ್ಆರ್ಟಿಸಿ ಬಸ್ ಡಿಪೋ ವೃತ್ತ, ಕಂಚಿಬಾಗಿಲು ವೃತ್ತ ಮೂಲಕ ಕನಕಮಂಟಪ ಮೈದಾನ ತಲುಪಲಿದೆ. ಸಂಜೆ ೪ ಗಂಟೆಗೆ ಕನಕಮಂಟಪ ಮೈದಾನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ನವುಲೆ ಬಸಾವಪುರದಲ್ಲಿ ಕುಮಾರ ಸ್ವಾಮಿ ಗ್ರಾಮ ವಾಸ್ತವ್ಯ ಹೂಡಲಿದ್ದಾರೆ.
ಪಕ್ಷದ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಶಾರದಾ ಅಪ್ಪಾಜಿ, ವಿಧಾನ ಪರಿಷತ್ ಸದಸ್ಯ ಎಸ್.ಎಲ್ ಬೋಜೇಗೌಡ, ರಾಜ್ಯ ಕಾರ್ಯದರ್ಶಿ ಜೆ.ಪಿ ಯೋಗೇಶ್, ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್, ಯುವ ಘಟಕದ ಜಿಲ್ಲಾಧ್ಯಕ್ಷ ಮಧು ಕುಮಾರ್ ನಗರ ಘಟಕದ ಅಧ್ಯಕ್ಷ ಆರ್ ಕರುಣಾ ಮೂರ್ತಿ, ಗ್ರಾಮಾಂತರ ಅಧ್ಯಕ್ಷ ಧರ್ಮಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.