ಭದ್ರಾವತಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸಂತ ಶ್ರೀ ಸೇವಾಲಾಲ್ ಜಯಂತಿ ತಾಲೂಕು ಕಛೇರಿ ಸಭಾಂಗಣದಲ್ಲಿ ಆಚರಿಸಲಾಯಿತು.
ಭದ್ರಾವತಿ, ಫೆ. ೧೬ : ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸಂತ ಶ್ರೀ ಸೇವಾಲಾಲ್ ಜಯಂತಿ ತಾಲೂಕು ಕಛೇರಿ ಸಭಾಂಗಣದಲ್ಲಿ ಆಚರಿಸಲಾಯಿತು.
ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್, ಬಂಜಾರ ರೈತರ ಸಂಘದ ರಾಜ್ಯಾಧ್ಯಕ್ಷ ಕೃಷ್ಣನಾಯ್ಕ, ಬಂಜಾರ ಸಂಘದ ತಾಲೂಕು ಅಧ್ಯಕ್ಷ ಪ್ರೇಮ್ಕುಮಾರ್ ಸೇರಿದಂತೆ ಇನ್ನಿತರರು ಸಂತ ಶ್ರೀ ಸೇವಾಲಾಲ್ರವರ ಕುರಿತು ಮಾತನಾಡಿದರು.
ಇದಕ್ಕೂ ಮೊದಲು ಸಂತ ಶ್ರೀ ಸೇವಾಲಾಲ್ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಶಿರಸ್ತೇದಾರ್ ರಾಧಕೃಷ್ಣಭಟ್, ಪ್ರಮುಖರಾದ ಹಾಲೇಶ್ನಾಯ್ಕ, ಪ್ರೊಫೆಸರ್ ಭೋಜನಾಯ್ಕ, ಮಲ್ಲಿಕಾನಾಯ್ಕ, ಮಂಜುನಾಯ್ಕ, ರಮೇಶ್ನಾಯ್ಕ, ಪಾವರ್ತಿಬಾಯಿ, ಶಿಕ್ಷಕ ಪ್ರಶಸ್ತಿ ಪುರಸ್ಕೃತೆ ಕೋಕಿಲ, ನಿವೃತ್ತ ಶಿಕ್ಷಕ ಜುಂಜ್ಯಾನಾಯ್ಕ, ದಲಿತ ಮುಖಂಡ ಕುಬೇಂದ್ರಪ್ಪ ಸೇರಿದಂತೆ ತಾಲೂಕು ಕಛೇರಿ ಅಧಿಕಾರಿಗಳು, ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment