ಭದ್ರಾವತಿ, ಫೆ. ೧೦: ನಗರದ ಹೊಸ ಸಿದ್ದಾಪುರದ-ನಂಜಾಪುರ ರಸ್ತೆಯಲ್ಲಿರುವ ಹೋಟೆಲ್ ಮೇಲೆ ನ್ಯೂಟೌನ್ ಪೊಲೀಸರು ದಾಳಿ ನಡೆಸಿ ಅಕ್ರಮ ಮದ್ಯ ವಶಪಡಿಸಿಕೊಂಡಿರುವ ಘಟನೆ ನಡೆದಿದೆ.
ಈ ವ್ಯಾಪ್ತಿಯಲ್ಲಿ ಬೀಟ್ ಗಸ್ತಿನಲ್ಲಿದ್ದ ಸಿ.ಎಚ್.ಸಿ ಗಂಗಾಧರ್ರವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಗುರುವಾರ ಮಧ್ಯಾಹ್ನ ಠಾಣಾಧಿಕಾರಿ ರಂಗನಾಥ ಅಂತರಗಟ್ಟಿರವರ ಮಾರ್ಗದರ್ಶನದಲ್ಲಿ ಪೊಲೀಸರು ಶಿವಕುಮಾರ್ ಎಂಬುವರ ಹೋಟೆಲ್ ಮೇಲೆ ದಾಳಿ ನಡೆಸಿದ್ದು, ಒಟ್ಟು ಸುಮಾರು ರು.೭೦೨ ರು. ಮೌಲ್ಯದ ಅಕ್ರಮ ಮದ್ಯ ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
No comments:
Post a Comment