ಶನಿವಾರ, ಫೆಬ್ರವರಿ 25, 2023

ಫೆ.೨೬ರಂದು ಶೃಂಗೇರಿ ಶಂಕರ ಮಠದಲ್ಲಿ ಶ್ರೀ ಸರಸ್ವತಿ ಪೂಜಾ

    ಭದ್ರಾವತಿ, ಫೆ. ೨೫ : ಸಿದ್ದಾರೂಢನಗರದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಫೆ.೨೬ರಂದು ಬೆಳಿಗ್ಗೆ ೧೦ ಗಂಟೆಗೆ ಶ್ರೀ ಸರಸ್ವತಿ ಪೂಜಾ ಮತ್ತು ಹೋಮ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
    ಪ್ರತಿ ವರ್ಷದಂತೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ವಿದ್ಯಾರ್ಥಿಗಳಿಂದ ಸಹಸ್ರನಾಮ ಅರ್ಚನೆ ಏರ್ಪಡಿಸಲಾಗಿದೆ. ವಿದ್ಯಾರ್ಥಿಗಳು ಸೇರಿದಂತೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಧರ್ಮಾಧಿಕಾರಿ ಕೆ.ಆರ್ ಸುಬ್ಬರಾವ್ ಮೊ: ೯೯೪೫೮೪೬೯೦೫ ಅಥವಾ ೯೯೦೦೨೪೯೩೦೨ ಸಂಖ್ಯೆಗೆ ಕರೆ ಮಾಡಬಹುದಾಗಿದೆ. 
--

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ