Friday, February 17, 2023

ಜೆಡಿಎಸ್ ನಗರ ಕಾರ್ಯದರ್ಶಿಯಾಗಿ ಎನ್. ರಾಮಕೃಷ್ಣ ನೇಮಕ

ಎನ್. ರಾಮಕೃಷ್ಣ
    ಭದ್ರಾವತಿ, ಫೆ. ೧೭ : ಜಾತ್ಯತೀತ ಜನತಾದಳ ನಗರ ಘಟಕದ ಕಾರ್ಯದರ್ಶಿಯಾಗಿ ಹುತ್ತಾಕಾಲೋನಿ ನಿವಾಸಿ, ಪಿ.ಎಲ್.ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಎನ್. ರಾಮಕೃಷ್ಣ ನೇಮಕಗೊಂಡಿದ್ದಾರೆ.
    ಪಕ್ಷದ ವರಿಷ್ಠರ ಸೂಚನೆ ಮೇರೆಗೆ ಎನ್. ರಾಮಕೃಷ್ಣರವರನ್ನು ನಗರ ಘಟಕದ ಕಾರ್ಯದರ್ಶಿಯಾಗಿ ನಗರ ಘಟಕದ ಅಧ್ಯಕ್ಷ ಆರ್. ಕರುಣಾಮೂರ್ತಿ ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. ಪಕ್ಷದ ತತ್ವ ಸಿದ್ದಾಂತಗಳಿಗೆ ಬದ್ಧರಾಗಿ ಪಕ್ಷದ ಮುಖಂಡರು, ಕಾರ್ಯಕರ್ತರೊಂದಿಗೆ ಸಮನ್ವಯತೆ ಕಾಯ್ದುಕೊಂಡು ಪಕ್ಷ ಬಲವರ್ಧನೆಗೆ ಶ್ರಮಿಸುವಂತೆ ಸೂಚಿಸಿದ್ದಾರೆ.
    ನಗರ ಘಟಕದ ಕಾರ್ಯದರ್ಶಿಯಾಗಿ ನೇಮಕಗೊಳ್ಳಲು ಕಾರಣಕರ್ತರಾದ ಪಕ್ಷದ ವರಿಷ್ಠರು, ಮುಖಂಡರು, ಕಾರ್ಯಕರ್ತರಿಗೆ ಎನ್. ರಾಮಕೃಷ್ಣ ಕೃತಜ್ಞತೆ ಸಲ್ಲಿಸಿದ್ದಾರೆ.

No comments:

Post a Comment