ಶುಕ್ರವಾರ, ಫೆಬ್ರವರಿ 24, 2023

ಓ.ಸಿ-ಮಟ್ಕಾ ಜೂಜಾಟ ಅಡ್ಡೆ ಮೇಲೆ ದಾಳಿ : ಓರ್ವನ ವಿರುದ್ಧ ಪ್ರಕರಣ ದಾಖಲು



    ಭದ್ರಾವತಿ, ಫೆ. ೨೪ : ಓ.ಸಿ-ಮಟ್ಕಾ ಜೂಜಾಟ ಅಡ್ಡೆಯೊಂದರ ಮೇಲೆ ದಾಳಿ ನಡೆಸಿ ಓರ್ವನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ನಡೆದಿದೆ.
    ಪೇಪರ್‌ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ೨ನೇ ಡಿವಿಜನ್ ಅಂಗನವಾಡಿ ಎದುರಿನ ರಸ್ತೆಯಲ್ಲಿ ಬೊಮ್ಮನಕಟ್ಟೆ ನಿವಾಸಿ ಸಾಧಿಕ್ ಎಂಬಾತ ಗುರುವಾರ ಸಂಜೆ ಜನರನ್ನು ಗುಂಪು ಸೇರಿಸಿಕೊಂಡು ಓ.ಸಿ-ಮಟ್ಕಾ ಜೂಜಾಟದಲ್ಲಿ ತೊಡಗಿದ್ದು, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ನ್ಯಾಯಾಲಯದ ಅನುಮತಿ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.  

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ