ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಗುತ್ತಿಗೆ ಕಾರ್ಮಿಕರು ಕಾರ್ಖಾನೆ ಮುಂಭಾಗ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಹೋರಾಟ ಗುರುವಾರ ೨೨ನೇ ದಿನ ಪೂರೈಸಿತು. ಈ ನಡುವೆ ಗುತ್ತಿಗೆ ಕಾರ್ಮಿಕರು ಹೋರಾಟ ತೀವ್ರಗೊಳಿಸಿದ್ದು, ಸಂಜೆ ಜನ್ನಾಪುರ, ಹುತ್ತಾಕಾಲೋನಿ ಸೇರಿದಂತೆ ವಿವಿಧೆಡೆ ಜಾಥಾ ನಡೆಸಿ ಕರಪತ್ರಗಳನ್ನು ವಿತರಿಸಿದರು.
ಭದ್ರಾವತಿ, ಫೆ. ೯ : ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಗುತ್ತಿಗೆ ಕಾರ್ಮಿಕರು ಕಾರ್ಖಾನೆ ಮುಂಭಾಗ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಹೋರಾಟ ಗುರುವಾರ ೨೨ನೇ ದಿನ ಪೂರೈಸಿತು. ಈ ನಡುವೆ ಗುತ್ತಿಗೆ ಕಾರ್ಮಿಕರು ಹೋರಾಟ ತೀವ್ರಗೊಳಿಸಿದ್ದು, ಸಂಜೆ ಜನ್ನಾಪುರ, ಹುತ್ತಾಕಾಲೋನಿ ಸೇರಿದಂತೆ ವಿವಿಧೆಡೆ ಜಾಥಾ ನಡೆಸಿ ಕರಪತ್ರಗಳನ್ನು ವಿತರಿಸಿದರು.
ಮೈಸೂರು ಮಹಾರಾಜರು ಹಾಗು ಸರ್.ಎಂ ವಿಶ್ವೇಶ್ವರಾಯನವರ ಪರಿಶ್ರಮದ ಫಲವಾಗಿ ನಿರ್ಮಾಣಗೊಂಡು ಶತಮಾನ ಪೂರೈಸಿರುವ ಕಾರ್ಖಾನೆಯನ್ನು ಉಳಿಸಿಕೊಳ್ಳಲು ನಡೆಸುತ್ತಿರುವ ನಮ್ಮ ಹೋರಾಟಕ್ಕೆ ನಾಗರೀಕರು ಸಹ ಬೆಂಬಲಿಸುವಂತೆ ಕರಪತ್ರಗಳನ್ನು ವಿತರಿಸಿ ಮನವಿ ಮಾಡಲಾಯಿತು.
ಹೋರಾಟ ಸ್ಥಳದಿಂದ ಆರಂಭಗೊಂಡ ಜಾಥಾ ಜಯಶ್ರೀ ವೃತ್ತ ಮೂಲಕ ನಂದಿನಿ ವೃತ್ತ ತಲುಪಿ ವಾಣಿಜ್ಯ ರಸ್ತೆಯಲ್ಲಿ ಸಾಗಿ, ಹುತ್ತಾ ಕಾಲೋನಿಯಲ್ಲಿ ಸಂಚರಿಸಿತು. ಲೋಯರ್ ಹುತ್ತಾ ಮೂಲಕ ಬಿ.ಎಚ್ ರಸ್ತೆಯಲ್ಲಿ ಸಾಗಿ ಡಬ್ಬಲ್ ರಸ್ತೆ ಮೂಲಕ ಪುನಃ ಹೋರಾಟ ಸ್ಥಳಕ್ಕೆ ಬಂದು ತಲುಪಿತು. ಗುತ್ತಿಗೆ ಕಾರ್ಮಿಕ ಸಂಘಟನೆಗಳ ಪ್ರಮುಖರು, ಗುತ್ತಿಗೆ ಕಾರ್ಮಿಕರು, ಮಹಿಳೆಯರು ಜಾಥಾದಲ್ಲಿ ಪಾಲ್ಗೊಂಡಿದ್ದರು.
ಫೆ.೧೧ರಂದು ಎಎಪಿ ರಾಜ್ಯಾಧ್ಯಕ್ಷ ಪೃಥ್ವಿರೆಡ್ಡಿ ಆಗಮನ:
೨೨ನೇ ದಿನದ ಹೋರಾಟಕ್ಕೆ ಆಮ್ ಆದ್ಮಿ ಪಾರ್ಟಿ ಬೆಂಬಲ ಸೂಚಿಸಿದ್ದು, ಹೋರಾಟ ಸ್ಥಳಕ್ಕೆ ಆಗಮಿಸಿದ್ದ ಜಿಲ್ಲಾ ಪ್ರಮುಖರು ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಹೋರಾಟಕ್ಕೆ ಎಲ್ಲಾ ರೀತಿಯ ಸಹಕಾರ ನೀಡಲು ಬದ್ಧವಾಗಿದ್ದೇವೆ. ಫೆ.೧೧ರಂದು ಪಕ್ಷದ ರಾಜ್ಯಾಧ್ಯಕ್ಷರಾದ ಪೃಥ್ವಿರೆಡ್ಡಿ ಆಗಮಿಸಲಿದ್ದಾರೆ ಎಂದರು.
No comments:
Post a Comment