Friday, February 17, 2023

ಜನಪರ, ಜನಸೇವೆ ಬಜೆಟ್ : ಡಾ. ಬಿ.ಜಿ ಧನಂಜಯ

ಡಾ. ಬಿ.ಜಿ ಧನಂಜಯ
    ಭದ್ರಾವತಿ, ಫೆ. ೧೭: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಈ ಬಾರಿ ಮಂಡಿಸಿರುವ ಬಜೆಟ್ ಜನಪರ, ಜನಸೇವೆ ಬಜೆಟ್ ಎಂದು ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಜಿ ಧನಂಜಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
    ಬಹಳ ವರ್ಷಗಳ ನಂತರ ಬಸವರಾಜ ಬೊಮ್ಮಾಯಿಯವರು ತಮ್ಮ ರಾಜಕೀಯ ಅನುಭವ ಹಾಗು ಆರ್ಥಿಕ ಜಾಣ್ಮೆ ಪ್ರದರ್ಶಿಸುವ ಮೂಲಕ ಉಳಿತಾಯ ಬಜೆಟ್ ಮಂಡಿಸಿದ್ದಾರೆ. ಶಿಕ್ಷಣ, ಆರೋಗ್ಯ, ಉದ್ಯೋಗಕ್ಕೆ ವಿಶೇಷ ಆದ್ಯತೆ ನೀಡಲಾಗಿದೆ. ಶಾಲಾ, ಕಾಲೇಜುಗಳ ಕೊಠಡಿ ನಿರ್ಮಾಣಕ್ಕೆ ಆದ್ಯತೆ, ಪಂಚಾಯತ್‌ರಾಜ್ ವ್ಯವಸ್ಥೆ ಗಟ್ಟಿಗೊಳಿಸುವ ಮೂಲಕ ತಂತ್ರಜ್ಞಾನ ಅಳವಡಿಕೆಗೆ ವಿಶೇಷ ಆದ್ಯತೆ ನೀಡಿರುವುದು ಒಳ್ಳೆಯ ಬೆಳವಣಿಗೆಯಾಗಿದೆ.
    ರೈತ ಶಕ್ತಿ, ಯುವ ಶಕ್ತಿ, ಸ್ತ್ರೀ ಶಕ್ತಿ ಬಳಕೆಗೆ ಉತ್ತಮ ಯೋಜನೆಗಳನ್ನು ರೂಪಿಸಲಾಗಿದೆ. ವಿಶೇಷವಾಗಿ ೧ ಲಕ್ಷ ಮಹಿಳೆಯರಿಗೆ ಉಚಿತ ಕೌಶಲ್ಯ ತರಬೇತಿ ನೀಡಲು ಮುಂದಾಗಿರುವುದು ಅವರು ಸ್ವಾವಲಂಬಿಗಳಾಗಿ ಬದುಕು ರೂಪಿಸಿಕೊಳ್ಳಲು ಸಹಕಾರಿಯಾಗಿದೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಇದು ಚುನಾವಣೆ ಉದ್ದೇಶದಿಂದ ಮಂಡಿಸಿರುವ ಬಜೆಟ್ ಅಲ್ಲ. ಬದಲಾಗಿ ಜನಪರ, ಜನಸೇವೆ ಬಜೆಟ್ ಆಗಿದೆ.

No comments:

Post a Comment