Sunday, February 26, 2023

ಪ್ರಧಾನಿ ಮೋದಿ ಗಮನ ಸೆಳೆಯಲು ಗುತ್ತಿಗೆ ಕಾರ್ಮಿಕರಿಂದ ಪಾದಯಾತ್ರೆ

ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಉಳಿವಿಗಾಗಿ ಅನಿರ್ಧಿಷ್ಟಾವಧಿ ಹೋರಾಟ ನಡೆಸುತ್ತಿರುವ ಗುತ್ತಿಗೆ ಕಾರ್ಮಿಕರು ಫೆ.೨೭ರಂದು ಪ್ರಧಾನಿ ಮೋದಿಯವರ ಗಮನ ಸೆಳೆಯಲು ಕುಟುಂಬ ಸಮೇತ ಪಾದಯಾತ್ರೆ ನಡೆಸಲು ಸಿದ್ದತೆ ಕೈಗೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಕಾರ್ಖಾನೆ ಮುಂಭಾಗ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
    ಭದ್ರಾವತಿ, ಫೆ. ೨೬: ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಉಳಿವಿಗಾಗಿ ಅನಿರ್ಧಿಷ್ಟಾವಧಿ ಹೋರಾಟ ನಡೆಸುತ್ತಿರುವ ಗುತ್ತಿಗೆ ಕಾರ್ಮಿಕರು ಫೆ.೨೭ರಂದು ಪ್ರಧಾನಿ ಮೋದಿಯವರ ಗಮನ ಸೆಳೆಯಲು ಕುಟುಂಬ ಸಮೇತ ಪಾದಯಾತ್ರೆ ನಡೆಸಲು ಸಿದ್ದತೆ ಕೈಗೊಂಡಿದ್ದಾರೆ.
    ಬೆಳಿಗ್ಗೆ ೬.೩೦ಕ್ಕೆ ಕಾರ್ಖಾನೆ ಮುಂಭಾಗದಿಂದ ಪಾದಯಾತ್ರೆ ಆರಂಭಿಸುತ್ತಿದ್ದು, ಗುತ್ತಿಗೆ ಕಾರ್ಮಿಕರ ಹೋರಾಟಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ವಿವಿಧ ಸಂಘ-ಸಂಸ್ಥೆಗಳು, ರಾಜಕೀಯ ಪಕ್ಷಗಳು ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.
    ಈಗಾಗಲೇ ಫೆ.೨೪ರಂದು ಕರೆ ನೀಡಲಾಗಿದ್ದ ಭದ್ರಾವತಿ ಬಂದ್ ಯಶಸ್ವಿಯಾಗಿರುವ ಹಿನ್ನಲೆಯಲ್ಲಿ ಪಾದಯಾತ್ರೆ ಸಹ ಯಶಸ್ವಿಯಾಗುವ ಹುಮ್ಮಸ್ಸು ಗುತ್ತಿಗೆ ಕಾರ್ಮಿಕರು ಹೊಂದಿದ್ದಾರೆ.
    ಈ ಹಿಂದೆ ಗುತ್ತಿಗೆ ಕಾರ್ಮಿಕರು ಖುದ್ದಾಗಿ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ಅವಕಾಶ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು. ಆದರೆ ಇದಕ್ಕೆ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗದ ಹಿನ್ನಲೆಯಲ್ಲಿ ಬೈಕ್ ರ‍್ಯಾಲಿ ಬದಲಿಗೆ ಪಾದಯಾತ್ರೆ ನಡೆಸಲು ನಿರ್ಧರಿಸಿದ್ದಾರೆ. ಗುತ್ತಿಗೆ ಕಾರ್ಮಿಕರು ಪಾದಯಾತ್ರೆ ನಡೆಸಲು ನಿರ್ಧಸಿರುವುದರಿಂದ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

No comments:

Post a Comment