Sunday, February 26, 2023

ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮ : ಶೂನ್ಯ ಸಂಚಾರ, ಪರ್ಯಾಯ ಮಾರ್ಗ ಅಧಿಸೂಚನೆ



    ಭದ್ರಾವತಿ, ಫೆ. ೨೬:  ಶಿವಮೊಗ್ಗ ಸೋಗಾನೆಯಲ್ಲಿ ನಿರ್ಮಿಸಲಾಗಿರುವ ನೂತನ ವಿಮಾನ ನಿಲ್ದಾಣದ ಉದ್ಘಾಟನಾ ಸಮಾರಂಭಕ್ಕೆ ಫೆ. ೨೭ ರಂದು ಸೋಮವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸುಗಮ ಸಂಚಾರದ ದೃಷ್ಟಿಯಿಂದ ಶೂನ್ಯ ಸಂಚಾರ ಮತ್ತು ಪರ್ಯಾಯ ಮಾರ್ಗಗಳನ್ನು ಗುರುತಿಸಿ ತಾತ್ಕಾಲಿಕ ಅಧಿಸೂಚನೆ ಹೊರಡಿಸಲಾಗಿದೆ.
    ಶೂನ್ಯ ಸಂಚಾರ ರಸ್ತೆ ಮಾರ್ಗ :
    ಫೆ. ೨೬ ಮತ್ತು ೨೭ರಂದು ಬೆಳಿಗ್ಗೆ ೬-೦೦ ಗಂಟೆಯಿಂದ ಸಂಜೆ ೬-೦೦ ಗಂಟೆಯವರೆಗೆ ಎಂ.ಆರ್.ಎಸ್ ಸರ್ಕಲ್ ನಿಂದ ಎನ್.ಆರ್ ಪುರ ರಸ್ತೆ ಲಕ್ಕಿನಕೊಪ್ಪ ಸರ್ಕಲ್ ವರೆಗೆ. ಹಾಗು ಮತ್ತೂರು-ಮಂಡೇನಕೊಪ್ಪ-ಸೋಗಾನೆ ವಿಮಾನ ನಿಲ್ದಾಣದವರೆಗೆ ಮಾರ್ಗಗಳಲ್ಲಿ ಶೂನ್ಯ ಸಂಚಾರ ರಸ್ತೆ ಎಂದು ಅಧಿಸೂಚನೆ ಹೊರಡಿಸಿದೆ.
    ಫೆ. ೨೭ರಂದು ಸಾರ್ವಜನಿಕ ವಾಹನಗಳ ಮಾರ್ಗ ಬದಲಾವಣೆ :
    ಎನ್.ಆರ್ ಪುರದಿಂದ ಭದ್ರಾವತಿ ಕಡೆಗೆ ಹೋಗುವ ವಾಹನಗಳು ಉಂಬ್ಳೆಬೈಲ್-ಹುಣಸೆಕಟ್ಟೆ - ಜಂಕ್ಷನ್ ಮೂಲಕ ಭದ್ರಾವತಿಗೆ ಹೋಗುವುದು.
    ಶಿಕಾರಿಪುರ-ಹೊನ್ನಾಳಿ-ದಾವಣಗೆರೆ ಕಡೆಯಿಂದ ಎನ್.ಆರ್ ಪುರಕ್ಕೆ ಹೋಗುವ ವಾಹನಗಳು ಶಿವಮೊಗ್ಗ ನಗರಕ್ಕೆ ಬಂದು ತೀರ್ಥಹಳ್ಳಿ ರಸ್ತೆ(ಎನ್.ಟಿ ರಸ್ತೆ) ಮೂಲಕ ಎನ್.ಆರ್ ಪುರಕ್ಕೆ ಹೋಗುವುದು.
    ತೀರ್ಥಹಳ್ಳಿ ರಸ್ತೆ ಕಡೆಯಿಂದ ಸಾಗರ ರಸ್ತೆ ಕಡೆಗೆ ಹೋಗುವ ಸಾರ್ವಜನಿಕ ವಾಹನಗಳು ನ್ಯೂ ಮಂಡ್ಲಿ ಸರ್ಕಲ್-ಗೋಪಾಳ-ಸರ್ಕಲ್-ಆಲ್ಕೊಳ ಸರ್ಕಲ್ ಮಾರ್ಗವಾಗಿ ಸಾಗರ ರಸ್ತೆಗೆ ಬಂದು ಸೇರುವುದು.
    ಸಾಗರ ರಸ್ತೆ ಕಡೆಯಿಂದ ತೀರ್ಥಹಳ್ಳಿ ರಸ್ತೆ ಕಡೆಗೆ ಹೋಗುವ ಸಾರ್ವಜನಿಕ ವಾಹನಗಳು ಆಲ್ಕೊಳ ಸರ್ಕಲ್-ಗೋಪಾಳ ಸರ್ಕಲ್ -ನ್ಯೂಮಂಡ್ಲಿ ಸರ್ಕಲ್ ಮಾರ್ಗವಾಗಿ ತೀರ್ಥಹಳ್ಳಿ ರಸ್ತೆಗೆ ಸೇರುವುದು.
    ಫೆ. ೨೭ರಂದು ಕಾರ್ಯಕ್ರಮಕ್ಕೆ ಆಗಮಿಸುವ ವಾಹನಗಳ ಮಾರ್ಗ :
    ಕಾರ್ಯಕ್ರಮಕ್ಕೆ ಆಗಮಿಸುವ ವಿವಿಐಪಿ ಪಾಸ್ ಹೊಂದಿರುವಂತಹ ಗಣ್ಯರು ಶಿವಮೊಗ್ಗ ನಗರದಿಂದ ಬೈಪಾಸ್-ಊರಗಡೂರು ಸರ್ಕಲ್ -ಸೂಳೆಬೈಲು-ಮತ್ತೂರು ರಸ್ತೆ ಎಡಭಾಗಕ್ಕೆ ತಿರುವು ಪಡೆದುಕೊಂಡು-ಮಂಡೇನಕೊಪ್ಪ ಮುಖಾಂತರ ಸೋಗಾನೆ ವಿಮಾನ ನಿಲ್ದಾಣಕ್ಕೆ ತಲುಪುವುದು.
    ತೀರ್ಥಹಳ್ಳಿ ಕೊಪ್ಪ, ಶೃಂಗೇರಿ, ಎನ್.ಆರ್ ಪುರ ಭಾಗದಿಂದ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳು ತೀರ್ಥಹಳ್ಳಿ ರಸ್ತೆ-ಮುಡುಬ ಬಲಕ್ಕೆ ತಿರುಗಿ ಶಂಕರಪುರ-ಉಂಬ್ಳೆಬೈಲು ಮುಖಾಂತರ ಲಕ್ಕಿನಕೊಪ್ಪ ಸರ್ಕಲ್‌ಗೆ ಬಂದು ಸೇರುವುದು. ನಂತರ ಲಕ್ಕಿನಕೊಪ್ಪ ಮತ್ತು ಸೋಗಾನೆ ಏರ್ ಪೋರ್ಟ್ ನಡುವಿನ ಗುರುತಿಸಿದ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕಿಂಗ್ ಮಾಡುವುದು.
    ಸಾಗರ, ಶಿಕಾರಿಪುರ, ಸೊರಬ,ಹೊಸನಗರ ದಿಂದ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳು ಶಿವಮೊಗ್ಗ ನಗರದಿಂದ ಅಶೋಕ ಸರ್ಕಲ್-ಬಿ.ಹೆಚ್ ರಸ್ತೆ-ಎ.ಎ ಸರ್ಕಲ್-ಶಂಕರ ಮಠ ಸರ್ಕಲ್-ಹೊಳೆಹೊನ್ನೂರು ಸರ್ಕಲ್-ಎಂ.ಆರ್.ಎಸ್ ಸರ್ಕಲ್ ಗೆ ಬಂದು ಬಲಕ್ಕೆ ತಿರುಗಿ ಸಂತೇಕಡೂರು ಸೋಗಾನ ಏರ್ ಪೋರ್ಟ್ ನಡುವೆ ಗುರುತಿಸಿದ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕಿಂಗ್ ಮಾಡುವುದು.
    ಶಿಕಾರಿಪುರ, ಹೊನ್ನಾಳಿ,ದಾವಣಗೆರೆ ಕಡೆಯಿಂದ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳು ಎಂ.ಆರ್.ಎಸ್. ಸರ್ಕಲ್ ಗೆ ಬಂದು ಬಲಕ್ಕೆ ತಿರುಗಿ ಸಂತೇಕಡೂರು ಸೋಗಾನೆ ಏರ್ ಪೋರ್ಟ್ ನಡುವೆ ಗುರುತಿಸಿದ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕಿಂಗ್ ಮಾಡುವುದು.
    ಶಿವಮೊಗ್ಗ ನಗರದಿಂದ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳು ಎಂ.ಆರ್.ಎಸ್ ಸರ್ಕಲ್‌ಗೆ ಬಂದು ಬಲಕ್ಕೆ ತಿರುಗಿ ಸಂತೇಕಡೂರು ಸೋಗಾನೆ ಏರ್ ಪೋರ್ಟ್ ನಡುವೆ ಗುರುತಿಸಿದ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕಿಂಗ್ ಮಾಡುವುದು.
    ತರಿಕೆರೆ, ಭದ್ರಾವತಿ, ಕಡೂರು, ಚಿಕ್ಕಮಗಳೂರು, ಭಾಗಗಳಿಂದ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳು ಭದ್ರಾವತಿ ನಗರದ ಕೃಷ್ಣಪ್ಪ ಸರ್ಕಲ್ ನಿಂದ ಎಡಕ್ಕೆ ತಿರುಗಿ-ಹಿರಿಯೂರು ಸರ್ಕಲ್-ತಾರೀಕಟ್ಟೆ ಸರ್ಕಲ್, ಹೆಚ್.ಕೆ ಜಂಕ್ಷನ್-ಲಕ್ಕಿನಕೊಪ್ಪ ಸರ್ಕಲ್‌ಗೆ ಬಂದು ಸೇರುವುದು. ನಂತರ ಲಕ್ಕಿನಕೊಪ್ಪ ಮತ್ತು ಸೋಗಾನೆ ಏರ್ ಪೋರ್ಟ್ ನಡುವಿನ ಗುರುತಿಸಿದ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕಿಂಗ್ ಮಾಡುವುದು.
    ಶೂನ್ಯ ಸಂಚಾರ ಮತ್ತು ಪರ್ಯಾಯ ಮಾರ್ಗಗಳಿಗೆ ತಾತ್ಕಾಲಿಕ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಸಾರ್ವಜನಿಕರು ಸಹಕರಿಸಲು ಕೋರಿದೆ.

No comments:

Post a Comment