ಭದ್ರಾವತಿ, ಜ. 21: ನ್ಯೂಕಾಲೋನಿ ಭಾಗದ ಯುವ ಮುಖಂಡರು, ಸಮಾಜ ಸೇವಕರುಗಳಾದ ರಾಷ್ಟ್ರೀಯ ಮಾನವ ಹಕ್ಕು ಭ್ರಷ್ಟಾಚಾರ ನಿಯಂತ್ರಣ ಮಂಡಳಿ ತಾಲೂಕು ಅಧ್ಯಕ್ಷ ಐ.ವಿ ಸಂತೋಷ್ ಕುಮಾರ್ ಮತ್ತು ಹಾಗೂ ಕಾಲ್ವರಿ ಕಾರುಣ್ಯ ಟ್ರಸ್ಟ್ ಸಂಸ್ಥಾಪಕ ಸ್ಟೀವನ್ ಜೋನಾಥನ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಬೆಣ್ಣೆಕೃಷ್ಣ ವೃತ್ತದಲ್ಲಿ ಮಹಾಶಿವರಾತ್ರಿ ಅಂಗವಾಗಿ ಆಯೋಜಿಸಲಾಗಿದ್ದ ಕಬಡ್ಡಿ ಪಂದ್ಯಾವಳಿಯಲ್ಲಿ ಯುವ ಮುಖಂಡ ಬಿ.ಎಸ್ ಗಣೇಶ್ ಸಮ್ಮುಖದಲ್ಲಿ ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ನಗರಸಭೆ ಮಾಜಿ ಸದಸ್ಯರಾದ ಬಾಲಕೃಷ್ಣ ಫ್ರಾನ್ಸಿಸ್, ಎಸ್.ಎಸ್ ಭೈರಪ್ಪ, ಹಾವು ಮಂಜ, ದಾಸ್, ನಾಸೀರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment