ಭದ್ರಾವತಿ, ಫೆ. ೨೨ : ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗು ಎಚ್.ಡಿ ಕುಮಾರಸ್ವಾಮಿ ಅಭಿಮಾನಿಗಳ ನಡುವೆ ಮಾತಿನ ಚಕಮಕಿ ನಡೆದು ವ್ಯಕ್ತಿಯೋರ್ವನ ಮೇಲೆ ನಡೆಸಿರುವ ಘಟನೆ ನಡೆದಿದೆ.
ತಾಲೂಕಿನ ಮಲ್ಲಿಗೇನಹಳ್ಳಿ ಕ್ಯಾಂಪ್ನಲ್ಲಿ ಉದ್ಯಮಿ ಆಕಾಶ್ಗೆ ಗೋಣಿಬೀಡು ನಿವಾಸಿಗಳಾದ ದಿನೇಶ್, ಯೋಗೇಶ್ ಮತ್ತು ಇತರೆ ಮೂವರು ಅಡ್ಡಗಟ್ಟಿದ್ದಾರೆ. ಈ ಹಿಂದೆ ಆಕಾಶ್ ೨೦೧೩ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದರು ಹಾಗಾಗಿ ೨೦೨೩ ರಲ್ಲಿಯೂ ಸಿದ್ದರಾಮಯ್ಯನೇ ಮುಖ್ಯಮಂತ್ರಿ ಆಗೋದು ಎಂದು ಹೇಳಿದ್ದರು.
ಇದೇ ವಿಚಾರವಾಗಿ ದಿನೇಶ್, ಯೋಗೀಶ್ ಮತ್ತು ಇತರೆ ಮೂವರು ಕುಮಾರ ಸ್ವಾಮಿಯವರೇ ಈ ಬಾರಿ ಮುಖ್ಯಮಂತ್ರಿಯಾಗೋದು ಎಂದು ಮಾತಿನ ಚಕಮಕಿ ನಡೆಸಿ ಆಕಾಶ್ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆ ಸಂದರ್ಭದಲ್ಲಿ ಕೊರಳಿನಲ್ಲಿ ಇದ್ದ ಬಂಗಾರದ ಸರ ಕಳುವಾಗಿದೆ ಎಂದು ಆಕಾಶ್ ದೂರಿನಲ್ಲಿ ದಾಖಲಿಸಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
No comments:
Post a Comment