Monday, February 20, 2023

ಅಪಘಾತ : ಚಿಕಿತ್ಸೆ ಫಲಕಾರಿಯಾಗದೆ ದ್ವಿಚಕ್ರ ವಾಹನ ಸವಾರ ಸಾವು

 
    ಭದ್ರಾವತಿ, ಫೆ. ೨೦: ದ್ವಿಚಕ್ರ ವಾಹನ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ನಡೆದಿದೆ.
    ದೊಡ್ಡಗೊಪ್ಪೇನಹಳ್ಳಿ ನಿವಾಸಿ ಬಿ. ಜಗದೀಶ್‌ರವರ ಪುತ್ರ ಭರತ್ ಮೃತಪಟ್ಟಿದ್ದು, ಈತ ಫೆ. ೧೭ರಂದು ರಾತ್ರಿ ಪಲ್ಸರ್ ದ್ವಿಚಕ್ರ ವಾಹನದಲ್ಲಿ ರಾಷ್ಟ್ರೀಯ ಹೆದ್ದಾರಿ ೬೯ರಲ್ಲಿ  ಸಂಚರಿಸುವಾಗ ರಸ್ತೆಯ ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದಾನೆ. ಅಪಘಾತದಲ್ಲಿ ಭರತ್ ತೀವ್ರ ಗಾಯಗೊಂಡಿದ್ದು, ಅಲ್ಲದೆ ಹಿಂಭಾಗದಲ್ಲಿ ಕುಳಿತಿದ್ದ ಸುಜಿತ್ ಮತ್ತು ಚಂದನರವರುಗಳಿಗೂ ಸಹ ಗಾಯಗಳಾಗಿವೆ. ತಕ್ಷಣ ಇವರನ್ನು ಶಿವಮೊಗ್ಗ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಫೆ.೧೮ರಂದು ರಾತ್ರಿ ಭರತ್ ಮೃತಪಟ್ಟಿದ್ದಾನೆ. ಈ ಸಂಬಂಧ ಪೇಪರ್‌ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No comments:

Post a Comment