Sunday, February 26, 2023

ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮಕ್ಕೆ ಸುಮಾರು ೨೫ ಸಾವಿರ ಮಂದಿ

೧೮೦ಕ್ಕೂ ಹೆಚ್ಚು ಬಸ್ಸು, ೩೦೦೦ಕ್ಕೂ ಹೆಚ್ಚು ಬೈಕ್ : ಜಿ. ಧರ್ಮಪ್ರಸಾದ್

ಜಿ. ಧರ್ಮಪ್ರಸಾದ್ 
    ಭದ್ರಾವತಿ, ಫೆ. ೨೬ : ನಗರದಲ್ಲಿ ವಿಐಎಸ್‌ಎಲ್ ಕಾರ್ಖಾನೆ ಉಳಿವಿಗಾಗಿ ಕಳೆದ ಸುಮಾರು ೪೦ ದಿನಗಳಿಂದ ನಿರಂತರವಾಗಿ ಹೋರಾಟಗಳು ನಡೆಯುತ್ತಿವೆ. ಈ ನಡುವೆ ಫೆ. ೨೭ರಂದು ನೂತನ ವಿಮಾನ ನಿಲ್ದಾಣ ಉದ್ಘಾಟನೆಗೆ ಆಗಮಿಸಲಿರುವ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸುಮಾರು ೨೫ ಸಾವಿರ ಮಂದಿ ತೆರಳಲಿದ್ದಾರೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ತಿಳಿಸಿದ್ದಾರೆ.
    ಈ ಕುರಿತು ಪತ್ರಿಕೆಗೆ ಮಾಹಿತಿ ನೀಡಿ, ಸುಮಾರು ೧೮೦ಕ್ಕೂ ಹೆಚ್ಚು ಬಸ್ಸು, ಸುಮಾರು ೩೦೦೦ಕ್ಕೂ ಹೆಚ್ಚು ಬೈಕ್ ಹಾಗು ಉಳಿದಂತೆ ಮ್ಯಾಕ್ಸಿಕ್ಯಾಬ್ ವ್ಯವಸ್ಥೆ ಕೈಗೊಳ್ಳಲಾಗಿದೆ. ಪಕ್ಷದ ಜಿಲ್ಲಾ ಮುಖಂಡರ ಮಾರ್ಗದರ್ಶನದಲ್ಲಿ ಆಯಾ ಬೂತ್‌ಗಳ ಅಧ್ಯಕ್ಷರು, ಪದಾಧಿಕಾರಿಗಳಿಗೆ ಜವಾಬ್ದಾರಿ ವಹಿಸಲಾಗಿದೆ.
    ಆಯಾ ಭಾಗದ ಪಕ್ಷದ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಶ್ರಮವಹಿಸುವ ಮೂಲಕ ಯಶಸ್ವಿಗೆ ಸಹಕರಿಸಬೇಕು. ಬೆಳಿಗ್ಗೆ ೭ ಗಂಟೆಗೆ ಜನರನ್ನು ಕರೆದೊಯ್ಯುವ ಮೂಲಕ ೮.೩೦ರೊಳಗಾಗಿ ವಿಮಾನ ನಿಲ್ದಾಣ ತಲುಪುವಂತೆ ಕೋರಲಾಗಿದೆ ಎಂದರು.  

No comments:

Post a Comment