ಭದ್ರಾವತಿ, ಮೇ. ೧೪ : ಮಾದಕ ವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬನ ವಿರುದ್ಧ ನ್ಯೂಟೌನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಗರಸಭೆ ವ್ಯಾಪ್ತಿಯ ಎನ್ಟಿಬಿ ಬಡಾವಣೆಯ ಉದ್ಯಾನವನ ಸಮೀಪ ಖಾಲಿ ಜಾಗದಲ್ಲಿ ಮಾದಕ ವಸ್ತು ಸೇವಿಸಿ ಅವಾಚ್ಯ ಶಬ್ದಗಳಿಂದ ಸಾರ್ವಜನಿಕರ ಶಾಂತಿಗೆ ಭಂಗ ಉಂಟುಮಾಡುತ್ತಿದ್ದು, ಈ ಭಾಗದಲ್ಲಿ ಗಸ್ತಿನಲ್ಲಿದ್ದ ಠಾಣಾಧಿಕಾರಿ ರಂಗನಾಥ ಅಂತರಗಟ್ಟಿಯವರು ಆತನನ್ನು ವಶಕ್ಕೆ ಪಡೆದು ಶಿವಮೊಗ್ಗ ಮೆಗ್ಗಾನ್ ಬೋಧನಾ ಆಸ್ಪತ್ರೆಗೆ ತಪಾಸಣೆಗೆ ಕಳುಹಿಸಿದ್ದಾರೆ. ಈತ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿರುವ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
No comments:
Post a Comment