Sunday, March 19, 2023

ಹಿರಿಯರು ಮಕ್ಕಳಿಗೆ ಧಾರ್ಮಿಕ ಆಚರಣೆ ಹೇಳಿಕೊಟ್ಟಾಗ ಮಾತ್ರ ಧರ್ಮ, ಸಂಸ್ಕೃತಿ ಉಳಿಸಿಕೊಳ್ಳಲು ಸಾಧ್ಯ

ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಶಾಖಾ ಮಠ ಯಡೆಯೂರು ಶ್ರೀ ರೇಣುಕಾ ಶಿವಾಚಾರ್ಯ ಸ್ವಾಮೀಜಿ

ಸರ್ಕಾರಿ ಪಡಿತರ ವಿತರಕರ ಸಂಘದ ಜಿಲ್ಲಾಧ್ಯಕ್ಷ ಹಾಗು ಜೇಡಿಕಟ್ಟೆ ಮರುಳ ಸಿದ್ದೇಶ್ವರ ಧಾರ್ಮಿಕ ಟ್ರಸ್ಟ್ ಅಧ್ಯಕ್ಷ ಸಿದ್ದಲಿಂಗಯ್ಯನವರ ತಾಯಿ ನಾಗಮ್ಮನವರ ಪುಣ್ಯಸ್ಮರಣೆ ಅಂಗವಾಗಿ ಭದ್ರಾವತಿ ಸಿದ್ದಾರೂಢ ನಗರದ ಶ್ರೀ ಶಂಕರಮಠದ ಮಿನಿಹಾಲ್‌ನಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಶಿವಗಣಾರಾಧನೆ ಕಾರ್ಯಕ್ರಮದಲ್ಲಿ ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಶಾಖಾ ಮಠ ಯಡೆಯೂರು ಶ್ರೀ ರೇಣುಕಾ ಶಿವಾಚಾರ್ಯ ಸ್ವಾಮೀಜಿ ಅಶೀರ್ವಚನ ನೀಡಿದರು.
    ಭದ್ರಾವತಿ, ಮಾ. ೧೯ : ಮನೆಯ ಹಿರಿಯರು ಮಕ್ಕಳಿಗೆ ಧಾರ್ಮಿಕ ಆಚರಣೆಗಳನ್ನು ಹೇಳಿಕೊಡುವ ಮೂಲಕ ಅವುಗಳ ಅನುಷ್ಠಾನಕ್ಕೆ ತರಲುಪ್ರಯತ್ನಿಸಬೇಕು. ಆಗ ಮಾತ್ರ ಧರ್ಮ, ಸಂಸ್ಕೃತಿ ಉಳಿಸಿಕೊಳ್ಳಲು ಸಾಧ್ಯ. ಈ ನಿಟ್ಟಿನಲ್ಲಿ ಲಿಂಗಾಯತರು ಲಿಂಗಧಾರಣೆ ಮಹತ್ವ ಅರಿತುಕೊಳ್ಳಬೇಕೆಂದು  ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಶಾಖಾ ಮಠ ಯಡೆಯೂರು ಶ್ರೀ ರೇಣುಕಾ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
    ಸರ್ಕಾರಿ ಪಡಿತರ ವಿತರಕರ ಸಂಘದ ಜಿಲ್ಲಾಧ್ಯಕ್ಷ ಹಾಗು ಜೇಡಿಕಟ್ಟೆ ಮರುಳ ಸಿದ್ದೇಶ್ವರ ಧಾರ್ಮಿಕ ಟ್ರಸ್ಟ್ ಅಧ್ಯಕ್ಷ ಸಿದ್ದಲಿಂಗಯ್ಯನವರ ತಾಯಿ ನಾಗಮ್ಮನವರ ಪುಣ್ಯಸ್ಮರಣೆ ಅಂಗವಾಗಿ ಸಿದ್ದಾರೂಢ ನಗರದ ಶ್ರೀ ಶಂಕರಮಠದ ಮಿನಿಹಾಲ್‌ನಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಶಿವಗಣಾರಾಧನೆ ಕಾರ್ಯಕ್ರಮದಲ್ಲಿ ಶ್ರೀಗಳು ಉಪಸ್ಥಿತರಿದ್ದು ಆಶೀರ್ವಚನ ನೀಡಿದರು.
    ಕುಟುಂಬದ ಹಿರಿಯರು ಮರಣ ಹೊಂದಿದಾಗ ದುಃಖಿಸುವ ಬದಲು ಅವರ ಆತ್ಮಕ್ಕೆ ಗೌರವ ತಂದು ಕೊಡುವ ರೀತಿಯಲ್ಲಿ ನಡೆದುಕೊಳ್ಳಬೇಕು. ಪ್ರತಿಯೊಬ್ಬರಿಗೂ ಸಾವು ಖಚಿತ. ಆದರೆ ನಮ್ಮ ಬದುಕಿನಲ್ಲಿ ರೂಢಿಸಿಕೊಳ್ಳುವ ಧರ್ಮ, ಸಂಸ್ಕಾರ ಬಹಳ ಮುಖ್ಯ. ಲಿಂಗಾಯತರು ಲಿಂಗಧಾರಣೆ ಮಾಡಿದರೆ ಸಾಲದು ಅದರ ಮಹತ್ವ, ಶಕ್ತಿ ಅರಿತು ಕೊಳ್ಳಬೇಕು. ಪ್ರತಿದಿನ ಅದರ ಆರಾಧನೆಯಲ್ಲಿ ತೊಡಗಬೇಕೆಂದರು.
    ಕುಟುಂಬದ ಬಗ್ಗೆ ಹೆಚ್ಚಿನ ಕಾಳಜಿವಹಿಸಬೇಕು. ಅದರಲ್ಲೂ ಹಿರಿಯರನ್ನು ಚೆನ್ನಾಗಿ ನೋಡಿಕೊಳ್ಳಬೇಕು. ಸಮಾಜದಲ್ಲಿ ಹಣ, ಆಸ್ತಿ ಯಾವುದೂ ಮುಖ್ಯವಲ್ಲ. ನೆಮ್ಮದಿ ಬಹಳ ಮುಖ್ಯ. ಇದನ್ನು ಕಂಡುಕೊಳ್ಳುವ ಮಾರ್ಗ ತಿಳಿದುಕೊಳ್ಳಬೇಕೆಂದರು.
    ಹಿರೇಮಠ ಬಿಳಿಕಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ, ಅಂಬಲದೇವನಹಳ್ಳಿ ಶ್ರೀ ಉಜ್ಜಿನೇಶ್ವರ ಶಿವಾಚಾರ್ಯ ಸ್ವಾಮೀಜಿ, ಬೀರೂರು ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಅಧ್ಯಕ್ಷ ಸುರೇಶಯ್ಯ, ಯುವ  ಘಟಕದ ಅಧ್ಯಕ್ಷ ಮಂಜುನಾಥ್, ಶ್ರೀ ಶಂಕರಮಠದ ವ್ಯವಸ್ಥಾಪಕ ಶಾಂತಕುಮಾರ್, ಓಂಕಾರಪ್ಪ, ಸಿದ್ದಲಿಂಗಯ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಪೂರ್ಣಿಮಾ ಸಿದ್ದಲಿಂಗಯ್ಯ ನಿರೂಪಿಸಿದರು.

No comments:

Post a Comment