Monday, March 27, 2023

ಬೀದಿ ನಾಯಿ ಹಾವಳಿ ನಿಯಂತ್ರಣಕ್ಕೆ ಆಗ್ರಹಿಸಿ ಪ್ರತಿಭಟನೆ : ಮನವಿ

ಭದ್ರಾವತಿ ನಗರಸಭೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸೋಮವಾರ ನಗರಸಭೆ ಮುಂಭಾಗ ಕೆಜಿಎನ್ ನೌಜವಾನ್ ಕಮಿಟಿವತಿಯಿಂದ ಪ್ರತಿಭಟನೆ ನಡೆಸಿ ಪರಿಸರ ಅಭಿಯಂತರ ಪ್ರಭಾಕರ್‌ರವರಿಗೆ ಮನವಿ ಸಲ್ಲಿಸಲಾಯಿತು.
    ಭದ್ರಾವತಿ, ಮಾ. ೨೭: ನಗರಸಭೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸೋಮವಾರ ನಗರಸಭೆ ಮುಂಭಾಗ ಕೆಜಿಎನ್ ನೌಜವಾನ್ ಕಮಿಟಿವತಿಯಿಂದ ಪ್ರತಿಭಟನೆ ನಡೆಸಿ ಪರಿಸರ ಅಭಿಯಂತರ ಪ್ರಭಾಕರ್‌ರವರಿಗೆ ಮನವಿ ಸಲ್ಲಿಸಲಾಯಿತು.
    ನಗರಸಭೆ ವ್ಯಾಪ್ತಿಯ ಎಲ್ಲಾ ವಾರ್ಡ್‌ಗಳಲ್ಲೂ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ನೆಹರು ನಗರದಲ್ಲಿ ೬ ವರ್ಷದ ಮಗುವಿನ ಮೇಲೆ ಬೀದಿನಾಯಿಗಳು ಏಕಾಏಕಿ ದಾಳಿ ನಡೆಸಿದ್ದು, ಇದರಿಂದಾಗಿ ಮಕ್ಕಳು, ಮಹಿಳೆಯರು, ವಯೋವೃದ್ದರು ಒಬ್ಬಂಟಿಯಾಗಿ ಸಂಚರಿಸಲು ಭಯಪಡುವಂತಾಗಿದೆ. ಈಗಾಗಲೇ ನಗರಸಭೆ ಹಲವು ವಾರ್ಡ್‌ಗಳಲ್ಲಿ ಬೀದಿನಾಯಿಗಳು ದಾಳಿ ನಡೆಸಿರುವ ಪ್ರಕರಣಗಳು ನಡೆದಿವೆ. ಈ ಸಂಬಂಧ ಮೌಖಿಕವಾಗಿ ನಾಯಿಗಳ ನಿಯಂತ್ರಣಕ್ಕೆ ಈ ಹಿಂದೆ ತಮ್ಮ ಗಮನಕ್ಕೆ ತರಲಾಗಿದೆ. ಆದರೂ ಸಹ ಯಾವುದೇ ಕ್ರಮ ಕೈಗೊಳ್ಳದಿರುವುದು ವಿಪರ್ಯಾಸದ ಸಂಗತಿಯಾಗಿದೆ. ತಕ್ಷಣ ಬೀದಿ ನಾಯಿಗಳನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.


    ಕೆಜಿಎನ್ ನೌಜವಾನ್ ಕಮಿಟಿ ಅಧ್ಯಕ್ಷ ಅಸದ್ ಉಲ್ಲಾ ಖಾನ್ ನೇತೃತ್ವ ವಹಿಸಿದ್ದರು. ಉಪಾಧ್ಯಕ್ಷರಾದ ಶಾಹಿದ್,  ಇಮ್ರಾನ್,  ಅಂಜುಮನ್-ಎ-ಇಸ್ಲಾಹುಲ್ ಮುಸ್ಲಿಮೀನ್ ಅಧ್ಯಕ್ಷ ಮುರ್ತುಜಾಖಾನ್, ದೇಶ ಪ್ರೇಮಿ ಟಿಪ್ಪು ಸುಲ್ತಾನ್ ಯುವಕರ ಸಂಘದ ಅಧ್ಯಕ್ಷ ಮೆಹಬೂಬ್, ಪ್ರಮುಖರಾದ ನಗರಸಭಾ ಸದಸ್ಯರಾದ ಟಿಪ್ಪು ಸುಲ್ತಾನ್, ಬಷೀರ್ ಅಹಮದ್,  ಅಬ್ದುಲ್ ಖದೀರ್, ಎ. ಮಸ್ತಾನ್, ಇಬ್ರಾಹಿಂ ಖಾನ್, ಜಾವಿದ್, ಕೇಸರಿಪಡೆ ಮಂಜುನಾಥ್ ಕೊಹ್ಲಿ,  ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

No comments:

Post a Comment