Friday, March 17, 2023

ಮಾ.೨೦ರಂದು ಎಸ್.ಸಿ ಮೋರ್ಚಾದಿಂದ “ನಮ್ಮ ನಡೆ ಭೀಮ ನಡೆ” ಬೃಹತ್ ಸಮಾವೇಶ

ಮಾ.೨೦ರಂದು ಜಿಲ್ಲಾ ಎಸ್.ಸಿ ಮೋರ್ಚಾದಿಂದ ಭದ್ರಾವತಿಯಲ್ಲಿ "ನಮ್ಮ ನಡೆ ಭೀಮ ನಡೆ" ಬೃಹತ್ ಸಮಾವೇಶ ಹಮ್ಮಿಕೊಂಡಿರುವ ಕುರಿತು ಎಸ್.ಸಿ ಮೋರ್ಚಾ ಜಿಲ್ಲಾಧ್ಯಕ್ಷ ಕಾಸರವಳ್ಳಿ ಶ್ರೀನಿವಾಸ್ ಸೇರಿದಂತೆ ಪಕ್ಷದ ಪ್ರಮುಖರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
    ಭದ್ರಾವತಿ, ಮೇ. ೧೭ : ಶಿವಮೊಗ್ಗ ಜಿಲ್ಲಾ ಬಿಜೆಪಿ ಎಸ್.ಸಿ ಮೊರ್ಚಾ ನೇತೃತ್ವದಲ್ಲಿ ಜಿಲ್ಲಾಮಟ್ಟದ "ನಮ್ಮ ನಡೆ ಭೀಮ ನಡೆ" ಬೃಹತ್ ಸಮಾವೇಶ ಭದ್ರಾವತಿ ಮಂಡಲ ಬಿಜೆಪಿ ಕಛೇರಿ ಮುಂಭಾಗದ ಆವರಣದಲ್ಲಿ ಮಾ.೨೦ರ ಸೋಮವಾರ ಬೆಳಿಗ್ಗೆ ೧೧ ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಎಸ್.ಸಿ ಮೋರ್ಚಾ ಜಿಲ್ಲಾಧ್ಯಕ್ಷ ಕಾಸರವಳ್ಳಿ ಶ್ರೀನಿವಾಸ್ ಹೇಳಿದರು.
    ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಸಮಾವೇಶದಲ್ಲಿ ಕರ್ನಾಟಕ ಗೃಹ ಸಚಿವ ಆರಗ ಜ್ಞಾನೇಂದ್ರ, ಸಂಸದ ಬಿ.ವೈ ರಾಘವೆಂದ್ರ, ಎಸ್.ಸಿ ಮೊರ್ಜಾ ರಾಜ್ಯಧ್ಯಕ್ಷ  ಛಲವಾದಿ ನಾರಯಣಸ್ವಾಮಿ  ಹಾಗೂ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ ಸೇರಿದಂತೆ ಪಕ್ಷದ ರಾಜ್ಯ, ಜಿಲ್ಲಾ ಮಟ್ಟದ ನಾಯಕರು, ಜಿಲ್ಲೆಯ ಎಲ್ಲಾ ಶಾಸಕರು, ವಿಧಾನಪರಿಷತ್ ಸದಸ್ಯರು ಸೇರಿದಂತೆ ಇನ್ನಿತರರು ಭಾಗವಹಿಸಲಿದ್ದಾರೆ ಎಂದರು.  
    ಎಸ್.ಸಿ ಮೊರ್ಚಾ ನೇತೃತ್ವದಲ್ಲಿ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಮೂಲಕ ಜಿಲ್ಲೆಯಲ್ಲಿ ಸುಮಾರು ೫೦೦ಕ್ಕೂ ಹೆಚ್ಚು ಪಲಾನುಭವಿಗಳಿಗೆ ಅನುದಾನ ಮಂಜೂರಾತಿ ಮಾಡಿಸಿಕೊಡಲಾಗಿದೆ.  ಪಕ್ಷ ಸಂಘಟನೆ ಜೊತೆಗೆ ಕೋವಿಡ್ ಸಂದರ್ಭದಲ್ಲಿ ಸಾವಿರಾರು ಮಂದಿ ಬಡವರಿಗೆ ಆಹಾರದ ಕಿಟ್‌ಗಳನ್ನು ವಿತರಣೆ ಮಾಡಲಾಗಿದೆ. ಬೃಹತ್ ಸಸಿ ನೆಡುವ ಕಾರ್ಯಕ್ರಮ, ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪುಸ್ತಕ, ಬ್ಯಾಗ್, ಪೆನ್ ವಿತರಣೆ, ಗರ್ಭಿಣಿ ಮಹಿಳೆಯರಿಗೆ ಮತ್ತು ಕುಷ್ಠ ರೋಗಿಗಳಿಗೆ ಪೌಷ್ಠಿಕ ಆಹಾರ ವಿತರಣೆ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳನ್ನು  ಆಯೋಜಿಸಲಾಗಿದ್ದು, ಹೆಚ್ಚು ಕ್ರಿಯಾಶೀಲವಾಗಿ ಮುನ್ನಡೆಯುತ್ತಿದೆ ಎಂದರು.
    ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಯವರಿಗೆ ಶೇ.೧೫ರಷ್ಟಿದ್ದ ಮಿಸಲಾತಿಯನ್ನು ಶೇ.೧೭ಕ್ಕೆ ಹೆಚ್ಚಳ ಮಾಡಿರುವುದು ರಾಜ್ಯದಲ್ಲಿ ಬಿಜೆಪಿ ಪಕ್ಷದ ಮೇಲೆ ಪರಿಶಿಷ್ಟ ಜಾತಿಯವರು ನಂಬಿಕೆ, ವಿಶ್ವಾಸ ಹೊಂದುವಂತಾಗಿದೆ. ಅಲ್ಲದೆ ಬಿಜೆಪಿ ಪಕ್ಷಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸೇರ್ಪಡೆಗೊಳ್ಳುತ್ತಿದ್ದಾರೆ. ಬೃಹತ್ ಸಮಾವೇಶದಲ್ಲಿ ಪರಿಶಿಷ್ಟ ಜಾತಿಯವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಯಶಸ್ವಿಗೊಳಿಸಬೇಕೆಂದು ಕೋರಿದರು.
    ಪಕ್ಷದ ತಾಲೂಕು ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ಕೆ ಶ್ರೀನಾಥ್, ಜಯರಾಮ್ ನಾಯ್ಕ್, ಎಂ. ರಾಜು, ಜಿಲ್ಲಾ ಪ್ರಭಾರಿ ದೇವರಾಜ್ ಮಂಡೇನ್ ಕೊಪ್ಪ, ತಾಲೂಕು ಅಧ್ಯಕ್ಷ ಗಣೇಶ್ ರಾವ್, ಪ್ರಮುಖರಾದ ಜಿ. ಆನಂದಕುಮಾರ್, ಮಂಗೋಟೆ ರುದ್ರೇಶ್, ಚಂದ್ರ ದೇವರನರಸೀಪುರ, ಆರ್.ಎಸ್ ಶೋಭಾ, ಅನ್ನಪೂರ್ಣ, ರೇಖಾ ಪದ್ಮಾವತಿ ಸೇರಿದಂತೆ ಇನ್ನಿತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

No comments:

Post a Comment