ಭದ್ರಾವತಿ, ಮಾ. ೩೧: ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಗುತ್ತಿಗೆ ಕಾರ್ಮಿಕರ ಸಂಘ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಹೋರಾಟ ೭೨ನೇ ದಿನಕ್ಕೆ ಕಾಲಿಟ್ಟಿದೆ. ಹೋರಾಟದ ಭಾಗವಾಗಿ ಶುಕ್ರವಾರ ಕಾರ್ಖಾನೆಯಲ್ಲಿರುವ ಶ್ರೀ ಚೌಡಮ್ಮ ದೇವಸ್ಥಾನದಲ್ಲಿ ಟ್ರಾಫಿಕ್ ಇಲಾಖೆ ಸಹಯೋಗದೊಂದಿಗೆ ಗುತ್ತಿಗೆ, ಕಾಯಂ ಕಾರ್ಮಿಕರು ಮತ್ತು ಅಧಿಕಾರಿಗಳಿಂದ ಗಣ ಹೋಮ ಧಾರ್ಮಿಕ ಆಚರಣೆ ನಡೆಸಲಾಯಿತು.
ಶ್ರೀ ಧರ್ಮಜಾಗರಣ ಅರ್ಚಕರ ಮಹಾಸಭಾ ವತಿಯಿಂದ ಗಣಹೋಮ ನಡೆಸಿಕೊಡಲಾಯಿತು. ಮಹಾಸಭಾ ಗೌರವಾಧ್ಯಕ್ಷರಾದ ವೇದಬ್ರಹ್ಮ ಶ್ರೀ ಕೃಷ್ಣಮೂರ್ತಿ ಸೋಮಯಾಜಿ ಮತ್ತು ಅಧ್ಯಕ್ಷ ಎಸ್.ವಿ ರಾಮಾನುಜ ಅಯ್ಯಂಗಾರ್ ನೇತೃತ್ವ ವಹಿಸಿದ್ದರು.
ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ, ವಿವಿಧ ಇಲಾಖೆಗಳ ಅಧಿಕಾರಿಗಳು, ಗುತ್ತಿಗೆ ಹಾಗು ಕಾಯಂ ಕಾರ್ಮಿಕರ ಮತ್ತು ಅಧಿಕಾರಿಗಳ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.
ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಯಲ್ಲಿರುವ ಶ್ರೀ ಚೌಡಮ್ಮ ದೇವಸ್ಥಾನದಲ್ಲಿ ಟ್ರಾಫಿಕ್ ಇಲಾಖೆ ವತಿಯಿಂದ ಗುತ್ತಿಗೆ ಕಾಯಂ ಕಾರ್ಮಿಕರು ಮತ್ತು ಅಧಿಕಾರಿಗಳಿಂದ ಕಾರ್ಖಾನೆ ಉಳಿವಿಗಾಗಿ ಗಣ ಹೋಮ ಧಾರ್ಮಿಕ ಆಚರಣೆ ನಡೆಸಲಾಯಿತು.
No comments:
Post a Comment