Monday, March 6, 2023

ಇಸ್ಪೀಟ್ ಅಡ್ಡೆ ಮೇಲೆ ದಾಳಿ


    ಭದ್ರಾವತಿ, ಮಾ. ೬ : ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ತಾಲೂಕಿನ ಯರೇಹಳ್ಳಿಯಲ್ಲಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ಅಡ್ಡೆಯೊಂದರ ಮೇಲೆ ದಾಳಿ ನಡೆಸಿರುವ ಘಟನೆ ನಡೆದಿದೆ.
    ಯರೇಹಳ್ಳಿ ಅಶ್ವಥ್‌ಕಟ್ಟೆ ಹತ್ತಿರ ಚಾನಲ್ ಏರಿ ಮೇಲೆ ಮಾ.೫ರಂದು ರಾತ್ರಿ ೯.೩೦ರ ಸಮಯದಲ್ಲಿ ಮಹೇಶ ಸೇರಿದಂತೆ ಇನ್ನಿತರರು ಗುಂಪು ಸೇರಿಕೊಂಡು ಜೂಜಾಟದಲ್ಲಿ ತೊಡಗಿದ್ದು, ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

No comments:

Post a Comment