Friday, March 31, 2023

ರಾಷ್ಟ್ರಪತಿ, ಮುಖ್ಯಮಂತ್ರಿ ಪ್ರಶಸ್ತಿ ಪುರಸ್ಕೃತ ದಾನಂ ಕರ್ತವ್ಯದಿಂದ ವಯೋನಿವೃತ್ತಿ

ಜಿಲ್ಲಾ ಪೊಲೀಸ್ ವತಿಯಿಂದ ಸನ್ಮಾನ, ಬೀಳ್ಕೊಡುಗೆ

ಭದ್ರಾವತಿ ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆಯ ಸಹಾಯಕ ಠಾಣಾಧಿಕಾರಿ(ಎಎಸ್‌ಐ)ಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ದಾನಂ ಶುಕ್ರವಾರ ನಿವೃತ್ತಿ ಹೊಂದಿದ್ದು, ಇವರನ್ನು ಜಿಲ್ಲಾ ಪೊಲೀಸ್ ವತಿಯಿಂದ ಸನ್ಮಾನಿಸಿ ಬೀಳ್ಕೊಡುಗೆ ನೀಡಲಾಯಿತು. 
    ಭದ್ರಾವತಿ, ಮಾ. ೩೧ : ನಗರದ ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆಯ ಸಹಾಯಕ ಠಾಣಾಧಿಕಾರಿ(ಎಎಸ್‌ಐ)ಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ದಾನಂ ಶುಕ್ರವಾರ ನಿವೃತ್ತಿ ಹೊಂದಿದ್ದು, ಇವರನ್ನು ಜಿಲ್ಲಾ ಪೊಲೀಸ್ ವತಿಯಿಂದ ಸನ್ಮಾನಿಸಿ ಬೀಳ್ಕೊಡುಗೆ ನೀಡಲಾಯಿತು.
    ಕಾನ್ಸ್‌ಟೇಬಲ್ ಹುದ್ದೆಗೆ ನೇಮಕಗೊಂಡು ತೀರ್ಥಹಳ್ಳಿಯಲ್ಲಿ ವೃತ್ತಿ ಆರಂಭಿಸಿದ ದಾನಂರವರು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದು, ಜಿಲ್ಲಾ ರಕ್ಷಣಾಧಿಕಾರಿಗಳ ಕಛೇರಿಯಲ್ಲಿ ಹೆಚ್ಚಿನ ಅವಧಿ ೨೫ ವರ್ಷಗಳಿಂದ ಗಣಕ ಯಂತ್ರ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.
    ಇವರು ಉತ್ತಮವಾಗಿ ಕರ್ತವ್ಯ  ನಿರ್ವಹಿಸಿ ರಾಷ್ಟ್ರಪತಿ ಪದಕ ಮತ್ತು ಮುಖ್ಯಮಂತ್ರಿಗಳ ಪದಕ ಪಡೆದುಕೊಂಡಿದ್ದರು. ಕಳೆದ ಸುಮಾರು ೬ ವರ್ಷಗಳಿಂದ ಸಹಾಯಕ ಠಾಣಾಧಿಕಾರಿ ಹುದ್ದೆಗೆ ಮುಂಬಡ್ತಿ ಹೊಂದಿ ಶಿವಮೊಗ್ಗ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ ಕಳೆದ ೩ ತಿಂಗಳಿನಿಂದ ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು.
    ಇವರು ಕರ್ತವ್ಯದಿಂದ ವಯೋನಿವೃತ್ತಿ ಹೊಂದಿದ್ದು, ಇವರಿಗೆ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ ಮಿಥುನ್‌ಕುಮಾರ್‌ರವರು ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿ ಬೀಳ್ಕೊಡುಗೆ ನೀಡಿದರು.
    ದಾನಂರವರು ಮೂಲತಃ ಭದ್ರಾವತಿಯವರಾಗಿದ್ದು, ಇಲ್ಲಿಯೇ ಹುಟ್ಟಿ ಬೆಳೆದು, ವಿದ್ಯಾಭ್ಯಾಸ ಪೂರೈಸಿದ್ದಾರೆ. ವಿದ್ಯಾಮಂದಿರದಲ್ಲಿ ವಾಸವಾಗಿದ್ದಾರೆ.

No comments:

Post a Comment