ಗುರುವಾರ, ಮಾರ್ಚ್ 30, 2023

ಚುನಾವಣೆ ನೀತಿ ಸಂಹಿತೆ ನಡುವೆ ವಿಜೃಂಭಣೆಯಿಂದ ಜರುಗಿದ ಶ್ರೀ ರಾಮನವಮಿ ಉತ್ಸವ

ಭದ್ರಾವತಿ ನಗರದ ವಿವಿಧ ದೇವಾಲಯಗಳಲ್ಲಿ ಗುರುವಾರ ಶ್ರೀ ರಾಮನವಮಿ ಉತ್ಸವ ವಿಜೃಂಭಣೆಯಿಂದ ಜರುಗಿತು. ಚುನಾವಣೆ ನೀತಿ ಸಂಹಿತೆ ಧಾರ್ಮಿಕ ಆಚರಣೆಗಳ ಮೇಲೆ ಯಾವುದೇ ರೀತಿ ಪರಿಣಾಮ ಉಂಟು ಮಾಡಲಿಲ್ಲ. 
    ಭದ್ರಾವತಿ, ಮಾ. ೩೦: ನಗರದ ವಿವಿಧ ದೇವಾಲಯಗಳಲ್ಲಿ ಗುರುವಾರ ಶ್ರೀ ರಾಮನವಮಿ ಉತ್ಸವ ವಿಜೃಂಭಣೆಯಿಂದ ಜರುಗಿತು. ಚುನಾವಣೆ ನೀತಿ ಸಂಹಿತೆ ಧಾರ್ಮಿಕ ಆಚರಣೆಗಳ ಮೇಲೆ ಯಾವುದೇ ರೀತಿ ಪರಿಣಾಮ ಉಂಟು ಮಾಡಲಿಲ್ಲ.
    ಬೆಳಿಗ್ಗೆಯಿಂದಲೇ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಸೇರಿದಂತೆ ಧಾರ್ಮಿಕ ಆಚರಣೆಗಳು ಜರುಗಿದವು. ಮಧ್ಯಾಹ್ನ ಪಾನಕ, ಕೋಸಂಬರಿ ವಿತರಣೆ ನಡೆಯಿತು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸ್ವಾಮಿಯ ಕೃಪೆಗೆ ಪಾತ್ರರಾದರು.


    ಬಹುತೇಕ ದೇವಸ್ಥಾನಗಳ ಬಳಿ ಯಾವುದೇ ರೀತಿಯ ಫ್ಲೆಕ್ಸ್‌ಗಳು, ಬ್ಯಾನರ್‌ಗಳು, ಬಂಟಿಂಗ್ಸ್‌ಗಳು ಕಂಡು ಬರಲಿಲ್ಲ. ದೇವಸ್ಥಾನ ಸಮಿತಿಗಳ ಪದಾಧಿಕಾರಿಗಳು, ಸೇವಾಕರ್ತರು ಹೊರತುಪಡಿಸಿ ಯಾವುದೇ ರಾಜಕೀಯ ಪಕ್ಷಗಳ, ಜನಪ್ರತಿನಿಧಿಗಳು ಸುಳಿವು ಕಂಡು ಬರಲಿಲ್ಲ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ