Thursday, March 2, 2023

ವಿಜ್ಞಾನ ದಿನ : ಪವಾಡಗಳ ರಹಸ್ಯ ಬಯಲು ಮೂಲಕ ಜಾಗೃತಿ


ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ಭದ್ರಾವತಿ ಬೊಮ್ಮನಕಟ್ಟೆ ಸರ್.ಎಂ.ವಿ ವಿಜ್ಞಾನ ಕಾಲೇಜಿನ ವಿಜ್ಞಾನ ವೇದಿಕೆ ವತಿಯಿಂದ ಪವಾಡಗಳ ರಹಸ್ಯ ಬಯಲು ಮತ್ತು ಜ್ಞಾನ ವಿಜ್ಞಾನ ಗೀತಾ ಗಾಯನ ಕಾರ್ಯಕ್ರಮ ಆಯೋಜಿಸಲಾಗಿತ್ತು. 

    ಭದ್ರಾವತಿ, ಮಾ. ೨ : ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ಬೊಮ್ಮನಕಟ್ಟೆ ಸರ್.ಎಂ.ವಿ ವಿಜ್ಞಾನ ಕಾಲೇಜಿನ ವಿಜ್ಞಾನ ವೇದಿಕೆ ವತಿಯಿಂದ ಪವಾಡಗಳ ರಹಸ್ಯ ಬಯಲು ಮತ್ತು ಜ್ಞಾನ ವಿಜ್ಞಾನ ಗೀತಾ ಗಾಯನ ಕಾರ್ಯಕ್ರಮ ಆಯೋಜಿಸಲಾಗಿತ್ತು.
    ಹಿರಿಯೂರು ಬಸಪ್ಪಗೌಡ ಮಲ್ಲಪ್ಪಗೌಡ ಮೆಮೋರಿಯಲ್ ರೆಸಿಡೆನ್ಸಿಯಲ್ (ಎಸ್‌ಬಿಎಂಎಂಆರ್) ಪ್ರೌಢಶಾಲೆ ಮುಖ್ಯೋಪಾಧ್ಯಾಯ, ಹವ್ಯಾಸಿ ಖಗೋಳ ಶಾಸ್ತ್ರಜ್ಞ ಹಾಗು ಗಾಯಕ ಹರೋನಹಳ್ಳಿ ಸ್ವಾಮಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಪ್ರಾತ್ಯಕ್ಷಿಕೆಯೊಂದಿಗೆ ಪವಾಡಗಳ ರಹಸ್ಯ ಬಯಲು ಮಾಡುವ ಮೂಲಕ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು.
    ಹರೋನಹಳ್ಳಿ ಸ್ವಾಮಿಯವರು ರಾಜ್ಯದ ವಿವಿಧೆಡೆ ಪವಾಡಗಳ ರಹಸ್ಯ ಬಯಲು ಕಾರ್ಯಕ್ರಮ ನಡೆಸುವ ಮೂಲಕ ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಇವರಿಗೆ ಹಲವಾರು ಪ್ರಶಸ್ತಿಗಳು ಲಭಿಸಿವೆ.
    ಕಾಲೇಜಿನ ವಿಜ್ಞಾನ ವೇದಿಕೆ ಸಂಚಾಲಕರಾದ ಡಾ. ಬಿ. ವಸಂತ್‌ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಸರ್.ಸಿ.ವಿ ರಾಮನ್‌ರವರ ಕುರಿತು ಹಾಗು ವಿಜ್ಞಾನ ಕ್ಷೇತ್ರಕ್ಕೆ ಅವರ ಕೊಡುಗೆಗಳನ್ನು ವಿವರಿಸಿದರು.
    ಕಾಲೇಜಿನ ಪ್ರಾಂಶುಪಾಲ ಪ್ರೊ. ಡಿ. ರಮೇಶ್ ಅಧ್ಯಕ್ಷತೆ ವಹಿಸಿದ್ದರು. ಎನ್‌ಎಸ್‌ಎಸ್ ಅಧಿಕಾರಿ ಡಾ. ಅರಸಯ್ಯ, ಐಕ್ಯೂಎಸಿ ಸಂಚಾಲಕ ಡಾ. ಜಿ.ಎಸ್ ಸಿದ್ದೇಗೌಡ  ಹಾಗು ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.  

No comments:

Post a Comment