Wednesday, March 1, 2023

ಸಂಚಾರಿ ಠಾಣೆ ಎಎಸ್‌ಐ ಕೆ.ಎನ್ ಚಂದ್ರಶೇಖರ್ ವಯೋ ನಿವೃತ್ತಿ : ಬೀಳ್ಕೊಡುಗೆ

ಭದ್ರಾವತಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ ವಯೋ ನಿವೃತ್ತಿ ಹೊಂದಿದ ಕೆ.ಎನ್ ಚಂದ್ರಶೇಖರ್(ಎಎಸ್‌ಐ)ರವರಿಗೆ ಜಿಲ್ಲಾ ಪೊಲೀಸ್ ವತಿಯಿಂದ ಬೀಳ್ಕೊಡುಗೆ ನೀಡಲಾಯಿತು.
    ಭದ್ರಾವತಿ, ಮಾ. ೨ : ಇಲ್ಲಿನ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ ವಯೋ ನಿವೃತ್ತಿ ಹೊಂದಿದ ಕೆ.ಎನ್ ಚಂದ್ರಶೇಖರ್(ಎಎಸ್‌ಐ)ರವರಿಗೆ ಜಿಲ್ಲಾ ಪೊಲೀಸ್ ವತಿಯಿಂದ ಬೀಳ್ಕೊಡುಗೆ ನೀಡಲಾಯಿತು.
    ವೃತ್ತಿ ಅವಧಿಯಲ್ಲಿ ಉತ್ತಮವಾಗಿ ಸೇವೆ ಸಲ್ಲಿಸಿರುವುದನ್ನು ಇಲಾಖೆವತಿಯಿಂದ ಸ್ಮರಿಸಲಾಯಿತು. ಕೆ.ಎನ್ ಚಂದ್ರಶೇಖರ್‌ರವರು ಹೆಚ್ಚಿನ ಅವಧಿಯನ್ನು ಶಿವಮೊಗ್ಗ ಜಿಲ್ಲೆಯಲ್ಲಿ ಪೂರೈಸಿದ್ದಾರೆ.
    ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ ಮಿಥುನ್ ಕುಮಾರ್ ನೆನಪಿನ ಕಾಣಿಕೆ ನೀಡಿ ಅಭಿನಂದಿಸಿ ಸನ್ಮಾನಿಸಿದರು. ಮುಂದಿನ ನಿವೃತ್ತಿ ಜೀವನಕ್ಕೆ ಶುಭ ಕೋರಿದರು.  ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment