ಭದ್ರಾವತಿ, ಏ. 16: ತಾಲೂಕು 10ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಮಾರೋಪ ಸಮಾರಂಭ ಭಾನುವಾರ ಸಂಜೆ ನಡೆಯಿತು.
ಬೆಂಗಳೂರಿನ ಹಿರಿಯ ಕವಿ ಎಚ್. ದುಂಡಿರಾಜ್ ಸಮಾರೋಪ ನುಡಿಗಳನ್ನಾಡಿದರು. ಕಸಾಪ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಅಭಿನಂದನಾ ನುಡಿಗಳನ್ನಾಡಿದರು. ಸಮ್ಮೇಳನಾಧ್ಯಕ್ಷ, ಸಾಹಿತಿ, ಹೊಸಹಳ್ಳಿ ದಾಳೇಗೌಡ, ಕಸಾಪ ತಾಲೂಕು ಅಧ್ಯಕ್ಷ ಕೋಡ್ಲು ಯಜ್ಞಯ್ಯ, ಮಾಜಿ ಅಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ, ಕೂಡ್ಲಿಗೆರೆ ಹೋಬಳಿ ಘಟಕ ಅಧ್ಯಕ್ಷ ಕೆ.ಎಸ್. ರೇವಪ್ಪ ಮತ್ತು ನಿವೃತ್ತ ಮುಖ್ಯ ಶಿಕ್ಷಕ ಸಿ.ಜಯಪ್ಪ ಉಪಸ್ಥಿತರಿದ್ದರು.
ಅನ್ನಪೂರ್ಣ ಸತೀಶ್ ನಿರೂಪಿಸಿದರು. ಜೆ.ಎನ್ ಬಸವರಾಜಪ್ಪ ವಂದಿಸಿದರು. ಸಮ್ಮೇಳನಾಧ್ಯಕ್ಷ, ಸಾಹಿತಿ, ಹೊಸಹಳ್ಳಿ ದಾಳೇಗೌಡರನ್ನು ಸನ್ಮಾನಿಸಿ ಗೌರವಿಸಲಾಯಿತು.
No comments:
Post a Comment