Tuesday, April 11, 2023

ಏ.೧೪ರಂದು ಬೃಹತ್ ರಕ್ತದಾನ ಶಿಬಿರ


    ಭದ್ರಾವತಿ, ಏ. ೧೧: ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ೧೩೨ ನೇ ಜನ್ಮದಿನ ಅಂಗವಾಗಿ ಏ. ೧೪ರಂದು ಬೆಳಿಗ್ಗೆ ೯.೩೦ ರಿಂದ ಮದ್ಯಾಹ್ನ ೧ ಗಂಟೆವರೆಗೆ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ.        
    ಆಸ್ಪತ್ರೆಯ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು, ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ರಕ್ತನಿಧಿ ಕೇಂದ್ರ, ನಗರದ ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಒಕ್ಕೂಟ, ಭಾರತೀಯ ವೈದ್ಯಕೀಯ ಸಂಘ, ಜಯ ಕರ್ನಾಟಕ ಸಂಘಟನೆ, ರೋಟರಿ ಕ್ಲಬ್ ಹಾಗೂ ಮಾಜಿ ಸೈನಿಕರ ಸಂಘದ  ಸಹಯೋಗದೊಂದಿಗೆ ಶಿಬಿರ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ.

No comments:

Post a Comment