Thursday, April 6, 2023

ಸುಣ್ಣದಹಳ್ಳಿ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪವಮಾನ ಹೋಮ, ರಥೋತ್ಸವ

ಭದ್ರಾವತಿ ತಾಲೂಕಿನ ಪುರಾಣ ಪ್ರಸಿದ್ದ ಸುಣ್ಣದಹಳ್ಳಿ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಗುರುವಾರ ಚಿತ್ರ ಪೂರ್ಣಿಮೆ ಪ್ರಯುಕ್ತ ಪವಮಾನ ಹೋಮ ಮತ್ತು ರಥೋತ್ಸವ ವಿಜೃಂಭಣೆಯಿಂದ ಜರಗಿತು.
    ಭದ್ರಾವತಿ, ಏ. ೬ : ತಾಲೂಕಿನ ಪುರಾಣ ಪ್ರಸಿದ್ದ ಸುಣ್ಣದಹಳ್ಳಿ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಗುರುವಾರ ಚಿತ್ರ ಪೂರ್ಣಿಮೆ ಪ್ರಯುಕ್ತ ಪವಮಾನ ಹೋಮ ಮತ್ತು ರಥೋತ್ಸವ ವಿಜೃಂಭಣೆಯಿಂದ ಜರಗಿತು
.  ಬೆಳಗ್ಗೆ ೬ ಗಂಟೆಗೆ ಪಂಚಾಮೃತ ಅಭಿಷೇಕ, ಪವಮಾನ ಹೋಮ,  ೧೨ ಗಂಟೆಗೆ ರಥೋತ್ಸವ ಹಾಗೂ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಸೇರಿದಂತೆ ಧಾರ್ಮಿಕ ಆಚರಣೆಗಳು ಸಂಕರ್ಷಣ ಧರ್ಮಸಂಸ್ಥೆ ನೇತೃತ್ವದಲ್ಲಿ ಜರುಗಿದವು  
    ವೇದಬ್ರಹ್ಮ ಶ್ರೀ ಗೋಪಾಲ ಆಚಾರ್, ಸಂಕರ್ಷಣ ಧರ್ಮಸಂಸ್ಥೆ ಅಧ್ಯಕ್ಷ ಯು.ಜಿ ಸುಬ್ರಹ್ಮಣ್ಯ, ರಾಘವೇಂದ್ರ, ವಾಸುದೇವಮೂರ್ತಿ, ಮಧುಸೂಧನ್, ಅನಂತರಾಮನ್, ರಮಾಕಾಂತ್, ವೆಂಕಟೇಶ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

No comments:

Post a Comment