Tuesday, April 11, 2023

ಅಕ್ರಮ ಮರಳು ಸಾಗಾಣಿಕೆ : ಪ್ರಕರಣ ದಾಖಲು

    ಭದ್ರಾವತಿ, ಏ. ೧೧: ಮನೆಯೊಂದರ ಹಿತ್ತಲಿನಲ್ಲಿ ಅಕ್ರಮವಾಗಿ ಮರಳು ಸಾಗಾಣಿಕೆ ಮಾಡಿರುವ ಸಂಬಂಧ ಗ್ರಾಮಾಂತರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    ತಾಲೂಕಿನ ಸುಲ್ತಾನ್‌ಮಟ್ಟಿ ಗ್ರಾಮದ ಚಂದ್ರು ಎಂಬುವರ ಮನೆಯ ಹಿತ್ತಲಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ಮರಳನ್ನು ಟಿಪ್ಪರ್ ಲಾರಿಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗಿದೆ.

No comments:

Post a Comment