Sunday, April 23, 2023

ರಸ್ತೆ ಅಪಘಾತ : ದ್ವಿಚಕ್ರ ವಾಹನ ಸವಾರ ಸಾವು

    ಭದ್ರಾವತಿ, ಏ. ೨೩ : ದ್ವಿಚಕ್ರ ವಾಹನ ಸವಾರನೋರ್ವ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಏ.೨೨ರ ಶನಿವಾರ ಮಧ್ಯಾಹ್ನ ನಗರದ ಸೀಗೆಬಾಗಿಯಲ್ಲಿ ನಡೆದಿದೆ.
    ಪವನು ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದು, ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇವರು ಹೋಂಡಾ ಎಕ್ಟಿವಾ ದ್ವಿಚಕ್ರ ವಾಹನದಲ್ಲಿ ಹಿಂಬದಿಯಲ್ಲಿ ಉಲ್ಲಾಸ್ ಎಂಬುವರನ್ನು ಕೂರಿಸಿಕೊಂಡು ಸೀಗೆಬಾಗಿ ಕಡೆ ಹೋಗುತ್ತಿದ್ದು, ಈ ಸಂದರ್ಭದಲ್ಲಿ ಇನ್ನೋವಾ ಕಾರು  ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದಿದೆ. ಈ ಹಿನ್ನಲೆಯಲ್ಲಿ ಪವನು ಮತ್ತು ಉಲ್ಲಾಸ್ ಇಬ್ಬರು ಗಾಯಗೊಂಡಿದ್ದು, ಇಬ್ಬರನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪವನು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆಂದು ಇವರ ಸಹೋದರ ಹೊಸಮನೆ ನಿವಾಸಿ ಸಚಿನ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.   

No comments:

Post a Comment