Wednesday, April 5, 2023

ಡಾ. ಬಾಬು ಜಗಜೀವನ ರಾಂರವರ ೧೧೬ನೇ ಜಯಂತಿ

ಭದ್ರಾವತಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬುಧವಾರ ಹಸಿರು ಕ್ರಾಂತಿ ಹರಿಕಾರ, ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ ರಾಂರವರ ೧೧೬ನೇ ಜಯಂತಿ ಆಚರಿಸಲಾಯಿತು.
    ಭದ್ರಾವತಿ, ಏ. ೫ : ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬುಧವಾರ ಹಸಿರು ಕ್ರಾಂತಿ ಹರಿಕಾರ, ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ ರಾಂರವರ ೧೧೬ನೇ ಜಯಂತಿ ಆಚರಿಸಲಾಯಿತು.
    ಚುನಾವಣೆ ನೀತಿ ಸಂಹಿತೆ ಹಿನ್ನಲೆಯಲ್ಲಿ ತಹಸೀಲ್ದಾರ್ ಸುರೇಶ್ ಆಚಾರ್ ನೇತೃತ್ವದಲ್ಲಿ ಸರಳವಾಗಿ ಆಚರಿಸಲಾಯಿತು. ಡಾ. ಬಾಬು ಜಗಜೀವನ ರಾಂರವರ ಭಾವಚಿತ್ರಕ್ಕೆ ಪುಷ್ಪ ನಮನದೊಂದಿಗೆ ಗೌರವ ಸಲ್ಲಿಸಲಾಯಿತು.
    ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ಸಮಾಜ ಕಲ್ಯಾಣ ನಿರ್ದೇಶಕ ಸಹಾಯಕ ನಿರ್ದೇಶಕ ಗೋಪಾಲಪ್ಪ ಹಾಗು ತಾಲೂಕು ಕಛೇರಿ ವಿವಿಧ ಶಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು, ದಲಿತ ಸಂಘರ್ಷ ಸಮಿತಿ ಪ್ರಮುಖರು ಪಾಲ್ಗೊಂಡಿದ್ದರು.  

No comments:

Post a Comment