ಭಾನುವಾರ, ಏಪ್ರಿಲ್ 30, 2023

ಓ.ಸಿ, ಮಟ್ಕಾ ಜೂಜಾಟ : ಓರ್ವನ ವಿರುದ್ಧ ಪ್ರಕರಣ ದಾಖಲು

    ಭದ್ರಾವತಿ, ಏ. ೩೦: ಸಾರ್ವಜನಿಕ ಸ್ಥಳದಲ್ಲಿ ಓ.ಸಿ, ಮಟ್ಕಾ ಜೂಜಾಟದಲ್ಲಿ ತೊಡಗಿದ್ದ ವ್ಯಕ್ತಿಯೋರ್ವನ ವಿರುದ್ಧ ನ್ಯಾಯಾಲಯದ ಅನುಮತಿ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
    ಹೊಸ ಕೋಡಿಹಳ್ಳಿ ಬಸ್ ನಿಲ್ದಾಣದ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಸೋಮಶೇಖರ್(೫೦) ಎಂಬಾತ ಓ.ಸಿ, ಮಟ್ಕಾ ಜೂಜಾಟದಲ್ಲಿ ತೊಡಗಿದ್ದು, ಖಚಿತ ಮಾಹಿತಿ ಮೇರೆಗೆ ಹೊಸಮನೆ ಶಿವಾಜಿ ಸರ್ಕಲ್ ಪೊಲೀಸರು ದಾಳಿ ನಡೆಸಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ